ಕಡಬ ತಾಲೂಕಿನಲ್ಲಿ ಪ್ರತೀ ತಿಂಗಳು ಲೋಕಾಯುಕ್ತರಿಂದ ದೂರು ಸ್ವೀಕಾರ: ವಿಜಯಪ್ರಸಾದ್

Update: 2019-09-18 09:02 GMT

ಕಡಬ, ಸೆ.18. ನೂತನವಾಗಿ ಉದ್ಘಾಟನೆಗೊಂಡ ಕಡಬ ತಾಲೂಕಿನಲ್ಲಿ ಇನ್ಮುಂದೆ ಪ್ರತೀ ತಿಂಗಳು ಲೋಕಾಯುಕ್ತ ಪೊಲೀಸರಿಂದ ಸಾರ್ವಜನಿಕ ದೂರುಗಳ ಸ್ವೀಕಾರ ಸಭೆ ನಡೆಯಲಿದೆ ಎಂದು ಮಂಗಳೂರು ವಿಭಾಗದ ಲೋಕಾಯುಕ್ತ ಡಿವೈಎಸ್ಪಿ ವಿಜಯಪ್ರಸಾದ್ ಹೇಳಿದ್ದಾರೆ.

ಮಂಗಳೂರು ವಿಭಾಗದ ಲೋಕಾಯುಕ್ತ ಪೋಲಿಸರಿಂದ ಬುಧವಾರ ಕಡಬದ ಅಂಬೇಡ್ಕರ್ ಭವನದಲ್ಲಿ ನಡೆದ ಸಾರ್ವಜನಿಕ ಅಹವಾಲು ಸ್ವೀಕಾರ ಸಭೆಯಲ್ಲಿ ದೂರುಗಳನ್ನು ಸ್ವೀಕರಿಸಿ ಮಾತನಾಡುತ್ತಿದ್ದರು. ಕಡಬ ತಾಲೂಕು ನೂತನವಾಗಿ ಅನುಷ್ಠಾನಕ್ಕೆ ಬಂದಿರುವುದರಿಂದ ಇಲ್ಲಿ ಲೋಕಾಯುಕ್ತರಿಂದ ಸಾರ್ವಜನಿಕ ದೂರು ಸ್ವೀಕಾರ ನಡೆದಿರಲಿಲ್ಲ. ಆದರೆ ಇನ್ಮುಂದೆ ಪ್ರತೀ ತಿಂಗಳು ದೂರು ಸ್ವೀಕಾರಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದರು.

ಈ ಸಂದರ್ಭ ಕಡಬ ತಾಲೂಕು ವ್ಯಾಪ್ತಿಯ ಹಲವು ಸಾರ್ವಜನಿಕರು ಸಮಸ್ಯೆಗಳ ಬಗ್ಗೆ ದೂರು ಸಲ್ಲಿಸಿದರು. ವೇದಿಕೆಯಲ್ಲಿ ಲೋಕಾಯುಕ್ತ ಇನ್ ಸ್ಪೆಕ್ಟರ್ ಭಾರತಿ, ಕಡಬ ತಹಶೀಲ್ದಾರ್ ಜಾನ್ ಪ್ರಕಾಶ್ ರೊಡ್ರಿಗಸ್ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News