ಪೊಲೀಸರ ನಿಂದನೆ ಆರೋಪ: ಯುವಕನ ಬಂಧನ

Update: 2019-09-18 17:04 GMT

ಬೆಂಗಳೂರು, ಸೆ.18: ಕರ್ನಾಟಕ ಪೊಲೀಸರ ಹೆಸರನ್ನು ಉಲ್ಲೇಖಿಸಿ ಅವಾಚ್ಯ ಪದಗಳಿಂದ ನಿಂದನೆ ಆರೋಪದಡಿ ಉಪ್ಪಾರಪೇಟೆ ಠಾಣಾ ಪೊಲೀಸರು ಓರ್ವ ಯುವಕನನ್ನು ಬಂಧಿಸಿದ್ದಾರೆ.

ತುಮಕೂರು ಮೂಲದ ರಾಕೇಶ್ ಬಂಧಿತ ಆರೋಪಿ ಎಂದು ತಿಳಿದುಬಂದಿದೆ.

ಮಹದೇಶ್ವರ ಬೆಟ್ಟಕ್ಕೆ ಹೊರಟಿದ್ದ ತನ್ನ ಬಳಿಯ ಹಣ ಕಸಿದಿದ್ದಾರೆ ಎಂದು ಅರೋಪಿಸಿ ಉಪ್ಪಾರಪೇಟೆ ಠಾಣಾ ಪೊಲೀಸರಿಗೆ ನಿಂದಿಸಿ, ವಿಡಿಯೊವೊಂದನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದ ಎನ್ನಲಾಗಿದೆ.

ಪ್ರಕರಣ ಕುರಿತು ಉಪ್ಪಾರಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆರೋಪಿ ಮಲ್ಲೇಶ್ವರಂನ ಖಾಸಗಿ ಹೊಟೇಲ್‌ನಲ್ಲಿ ಕೆಲಸ ಮಾಡುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News