ತಬ್ರೇಝ್ ಅನ್ಸಾರಿ ಗುಂಪು ಹತ್ಯೆ: 11 ಆರೋಪಿಗಳ ವಿರುದ್ಧ ಮರುಪ್ರಕರಣ ದಾಖಲು

Update: 2019-09-18 18:16 GMT

ರಾಂಚಿ,ಸೆ.18: ತಬ್ರೇಝ್ ಅನ್ಸಾರಿಯ ಗುಂಪಿನಿಂದ ಥಳಿಸಿ ಹತ್ಯೆಯ 11 ಆರೋಪಿಗಳ ವಿರುದ್ಧ ಜಾರ್ಖಂಡ್ ಪೊಲೀಸರು ಬುಧವಾರ ಮರುಪ್ರಕರಣ ದಾಖಲಿಸಿದ್ದಾರೆ. ಅನ್ಸಾರಿ ಹತ್ಯೆಯ ಕುರಿತ ಹೊಸ ವೈದ್ಯಕೀಯ ವರದಿ ಕೈಸೇರಿರುವ ಹಿನ್ನೆಲೆಯಲ್ಲಿ ಪೊಲೀಸರು ಈ ಕ್ರಮ ಕೈಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮರಣೋತ್ತರ ಪರೀಕ್ಷೆಯ ವರದಿಯನ್ನು ಆಧರಿಸಿ ಪೊಲೀಸರು ಸೆಪ್ಟಂಬರ್ 10ರಂದು ಪ್ರಕರಣದ 11 ಆರೋಪಿಗಳ ಮೇಲೆ ದಾಖಲಿಸಲಾಗಿದ್ದ ಹತ್ಯೆ ಪ್ರಕರಣವನ್ನು ರದ್ದುಗೊಳಿಸಿ ಉದ್ದೇಶಪೂರ್ವಕವಲ್ಲದ ಕೊಲೆ ಪ್ರಕರಣವಾಗಿ ಬದಲಾಯಿಸಿದ್ದರು. ಈ ಪರೀಕ್ಷೆಯಲ್ಲಿ ಅನ್ಸಾರಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ ಎಂದು ತಿಳಿಸಲಾಗಿತ್ತು.

ತಬ್ರೇಝ್ ಅನ್ಸಾರಿಯನ್ನು ಗುಂಪೊಂದು ಥಳಿಸುವ ದೃಶ್ಯಗಳು ಸಿಸಿಟಿವಿಯಲ್ಲಿ ದಾಖಲಾಗಿತ್ತು. ಆದರೆ ಅದರಲ್ಲಿ ಹಲ್ಲೆಕೋರರ ಮುಖ ಸ್ಪಷ್ಟವಾಗಿ ಕಾಣಿಸುತ್ತಿಲ್ಲ ಎಂದು ಪೊಲೀಸರು ತಿಳಿಸಿದ್ದರು. ಘಟನೆಗೆ ಸಂಬಂಧಪಟ್ಟಂತೆ ಇಬ್ಬರು ಪೊಲೀಸರನ್ನು ಅಮಾನತುಗೊಳಿಸಲಾಗಿತ್ತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News