ಮಂಜನಾಡಿ: ಬಸ್- ಟಿಪ್ಪರ್ ಮುಖಾಮುಖಿ ಢಿಕ್ಕಿ, ವಿದ್ಯಾರ್ಥಿಗಳಿಗೆ ಗಾಯ

Update: 2019-09-19 11:25 GMT

ದೇರಳಕಟ್ಟೆ, ಸೆ.19: ಖಾಸಗಿ ಬಸ್ ಮತ್ತು ಮರಳು ಸಾಗಾಟದ ಟಿಪ್ಪರ್ ನಡುವೆ ಮುಖಾಮುಖಿ ಢಿಕ್ಕಿ ಹೊಡೆದ ಘಟನೆ ಮಂಜನಾಡಿಯ ದೇವಸ್ಥಾನದ ಬಳಿ ಗುರುವಾರ ಬೆಳಗ್ಗೆ ಸಂಭವಿಸಿದೆ.

ಘಟನೆಯಲ್ಲಿ ಕೆಲವು ವಿದ್ಯಾರ್ಥಿಗಳು ಹಾಗೂ ಬಸ್ ಚಾಲಕ ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.

ಬಲೆತೋಡು ಎಂಬ ಖಾಸಗಿ ಬಸ್ ಮಂಗಳೂರಿನತ್ತ ತೆರಳುತ್ತಿದ್ದಾಗ ಎದುರಿನಿಂದ ಬರುತ್ತಿದ್ದ ಮರಳು ಸಾಗಾಟದ ಟಿಪ್ಪರ್‌ಗೆ ಮುಖಾಮುಖಿ ಢಿಕ್ಕಿಯಾಗಿದೆ. ಈ ವೇಳೆ ಬಸ್ಸಿನಲ್ಲಿ ಸಾಕಷ್ಟು ಪ್ರಯಾಣಿಕರಿದ್ದು, ಕೆಲವು ವಿದ್ಯಾರ್ಥಿಗಳಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಬಸ್ ಚಾಲಕನಿಗೂ ಗಾಯಗಳಾಗಿವೆ.

ಅಪಘಾತದ ಹಿನ್ನೆಲೆಯಲ್ಲಿ ಈ ರಸ್ತೆಯಲ್ಲಿ ಸುಮಾರು ಒಂದು ಗಂಟೆ ಕಾಲ ವಾಹನ ಸಂಚಾರ ಅಸ್ತವ್ಯಸ್ತಗೊಂಡಿತ್ತು.

ಘಟನೆಯ ಬಗ್ಗೆ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News