ಪಂಜರಕೋಡಿ: ಎಸ್ಸೆಸ್ಸೆಫ್ ನಿಂದ ಧ್ವಜ ದಿನ ಕಾರ್ಯಕ್ರಮ

Update: 2019-09-19 06:33 GMT

ಸಾಲೆತ್ತೂರು, ಸೆ.19: ಕರ್ನಾಟಕ ರಾಜ್ಯ ಸುನ್ನೀ ಸ್ಟೂಡೆಂಟ್ಸ್ ಫೆಡರೇಶನ್ (ಎಸ್ಸೆಸ್ಸೆಫ್) ಇದರ ಧ್ವಜ ದಿನಾಚರಣೆಯ ಪ್ರಯುಕ್ತ ಎಸ್ಸೆಸ್ಸೆಫ್ ಮಿತ್ತರಾಜೆ ಶಾಖೆಯ ವತಿಯಿಂದ ಧ್ವಜಾರೋಹಣ ಕಾರ್ಯಕ್ರಮವು ಪಂಜರಕೋಡಿ ರಿಫಾಇಯ್ಯ ಜುಮಾ ಮಸೀದಿಯ ಆವರಣದಲ್ಲಿ ನಡೆಯಿತು.

ಪಂಜರಕೋಡಿ ಜುಮಾ ಮಸೀದಿ ಖತೀಬ್ ಅಬೂಬಕರ್ ಮದನಿ ಉಸ್ತಾದ್ ಹಾಗೂ ಎಸ್ಸೆಸ್ಸೆಫ್ ಮಿತ್ತರಾಜೆ ಶಾಖೆಯ ಅಧ್ಯಕ್ಷ ದಾವುದ್ ಧ್ವಜಾರೋಹಣ ನೆರವೇರಿಸಿದರು. ಜುಮಾ ಮಸೀದಿಯ ಪ್ರಧಾನ ಕಾರ್ಯದರ್ಶಿ ಉಮರ್ ಅಬ್ಬೆಮ್ಮಾರ್‌ ವಂದಿಸಿದರು.

ಕಾರ್ಯಕ್ರಮದಲ್ಲಿ ಪಂಜರಕೋಡಿ ರಿಫಾಇಯ್ಯ ಜುಮಾ ಮಸೀದಿಯ ಅಧ್ಯಕ್ಷ ಮಜೀದ್ ಕಲ್ಲಕಟ್ಟ, ಕೊಳ್ನಾಡು ಗ್ರಾಮ ಪಂಚಾಯತ್ ಸದಸ್ಯರಾದ ಇಬ್ರಾಹೀಂ ಮಿತ್ತರಾಜೆ, ಎಸ್.ವೈ.ಎಸ್. ಪಂಜರಕೋಡಿ ಬ್ರಾಂಚ್ ಅಧ್ಯಕ್ಷ ಹಮೀದ್ ಬಿಬಿಸಿ ಮತ್ತಿತರರು ಪಾಲ್ಗೊಂಡಿದ್ದರು.

ಕಾರ್ಯಕ್ರಮದಲ್ಲಿ ಮುಅಲ್ಲಿಂ ಶರೀಫ್ ಹನೀಫಿ ಮಾರ್ನಾಡ್ ಸ್ವಾಗತಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News