ಸೆ.22: ಡಿವೈಎಫ್‌ಐ ಮಂಗಳೂರು ನಗರ ಸಮ್ಮೇಳನ

Update: 2019-09-19 12:11 GMT

ಮಂಗಳೂರು, ಸೆ.19: ಉದ್ಯೋಗ ಸೃಷ್ಟಿಸಿ, ನಿರುದ್ಯೋಗದಿಂದ ರಕ್ಷಿಸಿ, ಜೀವನ ಭದ್ರತೆಯ ಉದ್ಯೋಗ, ಘನತೆಯ ಬದುಕಿಗಾಗಿ ಎಂಬ ಘೋಷವಾಕ್ಯದೊಂದಿಗೆ ಡಿವೈಎಫ್‌ಐ 12ನೇ ನಗರ ಸಮ್ಮೇಳನವು ಸೆ.22ರಂದು ನಗರದ ಕುದ್ಮುಲ್ ರಂಗರಾವ್ ಪುರಭವನದಲ್ಲಿ ಜರುಗಲಿದೆ.

ಬೆಳಗ್ಗೆ 9:30ಕ್ಕೆ ಡಿವೈಎಫ್‌ಐ ನಗರ ಅಧ್ಯಕ್ಷ ನವೀನ್ ಬೊಲ್ಪುಗುಡ್ಡೆ ಧ್ವಜಾರೋಹಣ ನಡೆಸಲಿದ್ದಾರೆ. ಬಳಿಕ ಡಿವೈಎಫ್ಐ ಕರ್ನಾಟಕ ರಾಜ್ಯಾಧ್ಯಕ್ಷ ಮುನೀರ್ ಕಾಟಿಪಳ್ಳ ಸಮ್ಮೇಳನ ಉದ್ಘಾಟಿಸಲಿದ್ದಾರೆ. ಜನಪರ ಚಿಂತಕರು, ಹೋರಾಟಗಾರ ಮಹೇಂದ್ರ ಕುಮಾರ್ ಪ್ರಮುಖ ಭಾಷಣ ಮಾಡಲಿದ್ದಾರೆ. ಡಿವೈಎಫ್‌ಐ ದ.ಕ. ಜಿಲ್ಲಾಧ್ಯಕ್ಷ ಬಿ.ಕೆ. ಇಮ್ತಿಯಾಝ್, ಜಿಲ್ಲಾ ಕಾರ್ಯದರ್ಶಿ ಸಂತೋಷ್ ಬಜಾಲ್, ಯುವತಿಯರ ಉಪ ಸಮಿತಿಯ ರಾಜ್ಯ ಸಹ ಸಂಚಾಲಕಿ, ಜಿಲ್ಲಾ ಸಹ ಕಾರ್ಯದರ್ಶಿ ಆಶಾ ಬೋಳೂರ್ ಅತಿಥಿಯಾಗಿ ಭಾಗವಹಿಸಲಿದ್ದಾರೆ ಎಂದು ಡಿವೈಎಫ್‌ಐ ನಗರ ಕಾರ್ಯದರ್ಶಿ ಸಾದಿಕ್ ಕಣ್ಣೂರು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News