ಶವಸಂಸ್ಕಾರ ಭತ್ತೆ 25 ಸಾವಿರ ರೂ.ಗೆ ಹೆಚ್ಚಳ: ಪ್ರಸ್ತಾವನೆ ಮಂಡಿಸಲು ಮುಖ್ಯಮಂತ್ರಿ ಸೂಚನೆ

Update: 2019-09-19 12:22 GMT

ಬೆಂಗಳೂರು, ಸೆ. 19: ಸರಕಾರಿ ನೌಕರರು ಸೇವಾ ಅವಧಿಯಲ್ಲಿ ಮೃತಪಟ್ಟರೆ ಶವಸಂಸ್ಕಾರ ಭತ್ತೆಯನ್ನು 5 ಸಾವಿರ ರೂ.ನಿಂದ 25 ಸಾವಿರ ರೂ.ಗಳಿಗೆ ಹೆಚ್ಚಳ ಮಾಡಲು ಕೂಡಲೇ ಪ್ರಸ್ತಾವನೆ ಸಲ್ಲಿಸಲು ರಾಜ್ಯ ಸರಕಾರದ ಮುಖ್ಯಕಾರ್ಯದರ್ಶಿ ವಿಜಯ್ ಭಾಸ್ಕರ್ ಅವರಿಗೆ ಮುಖ್ಯಮಂತ್ರಿ ಯಡಿಯೂರಪ್ಪ ಸೂಚಿಸಿದ್ದಾರೆ.

ರಾಜ್ಯ ಸರಕಾರಿ ನೌಕರರ ಸಂಘದ ಅಧ್ಯಕ್ಷರ ಶವಸಂಸ್ಕಾರ ಕಾರ್ಯಕ್ಕೆ 5 ಸಾವಿರ ರೂ. ಸಾಕಾಗುವುದಿಲ್ಲ. ಆದುದರಿಂದ ಆ ಭತ್ತೆಯನ್ನು 25 ಸಾವಿರ ರೂ.ಗಳಿಗೆ ಹೆಚ್ಚಳ ಮಾಡಬೇಕೆಂಬ ಮನವಿ ಹಿನ್ನೆಲೆಯಲ್ಲಿ ಮೇಲ್ಕಂಡ ಸೂಚನೆ ನೀಡಲಾಗಿದೆ ಸಿಎಂ ಯಡಿಯೂರಪ್ಪ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News