ಮಂಗಳೂರು: ಪ್ರತಿಭಾ ಪುರಸ್ಕಾರಕ್ಕಾಗಿ ಅರ್ಜಿ ಆಹ್ವಾನ

Update: 2019-09-19 12:41 GMT

ಮಂಗಳೂರು,ಸೆ.19: ಬಂಟರ ಯಾನೆ ನಾಡವರ ಮಾತೃಸಂಘದ ಮಂಗಳೂರು ತಾಲೂಕು ಸಮಿತಿಯ ಆಶ್ರಯದಲ್ಲಿ 2018-19ನೇ ಸಾಲಿನ ಎಸೆಸ್ಸೆಲ್ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಅತ್ಯಧಿಕ ಅಂಕಗಳಿಸಿದ ಮಂಗಳೂರು ತಾಲೂಕು ವ್ಯಾಪ್ತಿಯ ಅರ್ಹ ಸ್ವಜಾತಿ ವಿದ್ಯಾರ್ಥಿಗಳಿಂದ ಪ್ರತಿಭಾ ಪುರಸ್ಕಾರಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸುವವರು ಎಸೆಸ್ಸೆಲ್ಸಿಯಲ್ಲಿ ಶೇ.96 ಅಂಕಕ್ಕಿಂತ ಅಧಿಕ ಹಾಗೂ ಎಸೆಸ್ಸೆಲ್ಸಿ-ಸಿಬಿಎಸ್‌ಇ-ಸಿಜಿಪಿಎ-10 ಮತ್ತು ಪಿಯುಸಿಯಲ್ಲಿ 580ಕ್ಕೂ ಅಧಿಕ ಅಂಕ ಗಳಿಸಿರಬೇಕು. ದ್ಯಾರ್ಥಿಗಳು ಅಂಕ ಪಟ್ಟಿಯ ಜೊತೆ ಬಿಳಿ ಹಾಳೆಯಲ್ಲಿ ಅರ್ಜಿಯನ್ನು ಬರೆದು ಸೆ.25ರೊಳಗೆ ಗೋಪಾಲಕೃಷ್ಣ ಶೆಟ್ಟಿ ಸಂಚಾಲಕರು, ಪ್ರತಿಭಾ ಪುರಸ್ಕಾರ ಸಮಿತಿ, ಬಂಟರ ಯಾನೆ ನಾಡವರ ಮಾತೃಸಂಘ, ಮಂಗಳೂರು ತಾಲೂಕು ಸಮಿತಿ, ಬಂಟ್ಸ್‌ಹಾಸ್ಟೆಲ್, ಮಂಗಳೂರು-575003 ಈ ವಿಳಾಸಕ್ಕೆ ತಲುಪಿಸುವಂತೆ ಮಂಗಳೂರು ತಾಲೂಕು ಸಮಿತಿಯ ಸಂಚಾಲಕ ಜಯರಾಮ ಸಾಂತ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News