ಸೆ.22: ಆಧಾರ್ ಗುರುತು ಪತ್ರದ ಸೇವಾ ಶಿಬಿರ

Update: 2019-09-19 13:17 GMT

ಪಡುಬಿದ್ರಿ: ಆಧಾರ್ ಗುರುತು ಪತ್ರದ ವಿವಿಧ ಸೇವಾ ಶಿಬಿರಗಳನ್ನು ಸೆಪ್ಟಂಬರ್ 22ರಂದು ಆದಿತ್ಯವಾರ ಶ್ರೀ ನಾರಾಯಣ ಗುರು ಸಭಾಭವನದಲ್ಲಿ ಬೆಳಗ್ಗೆ 8.30ರಿಂದ ಸಂಜೆ 4ರವರೆಗೆ ನಡೆಯಲಿದೆ.

ರೋಟರಿ ಕ್ಲಬ್ ಪಡುಬಿದ್ರಿ, ಇನ್ನರ್ ವೀಲ್ ಪಡುಬಿದ್ರಿ ಇವರ ಜಂಟಿ ಆಶ್ರಯದಲ್ಲಿ ಭಾರತೀಯ ಅಂಚೆ ಇಲಾಖೆ ಉಡುಪಿ ಮತ್ತು ಮಂಗಳೂರು ವಿಭಾಗ ಇವರ ಸಹಯೋಗದೊಂದಿಗೆ ಈ ಶಿಬಿರ ಆಯೋಜಿಸಲಾಗಿದೆ.

ಶಿಬಿರದಲ್ಲಿ ಹೆಸರು ನೊಂದಾವಣೆ, ವಿಳಾಸ ಮತ್ತು ಹೆಸರು ಬದಲಾವಣೆ, ಬಯೋಮೆಟ್ರಿಕ್ ಪರಿಷ್ಕರಣೆ, ಮೊಬೈಲ್ ನಂಬ್ರ ತಿದ್ದುಪಡಿಗಳನ್ನು ಮಾಡಲಾಗುವುದು. ಈ ಸೇವೆಯನ್ನು ಸದುಪಯೋಗಪಡಿಸಿಕೊಳ್ಳಿ. ಹೆಚ್ಚಿನ ಮಾಹಿತಿಗಾಗಿ 8861493439, 9964073457 ಸಂಪರ್ಕಿಸಬಹುದು ಎಂದು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News