ಕಡಬ: ಕಾರುಗಳ ಮಧ್ಯೆ ಅಪಘಾತ; ಇಬ್ಬರಿಗೆ ಗಾಯ

Update: 2019-09-19 13:29 GMT

ಕಡಬ: ಮಾರುತಿ ಸುಝುಕಿ ಸ್ವಿಫ್ಟ್ ಹಾಗೂ ಮಹೀಂದ್ರಾ ಕೆಯುವಿ 100 ಕಾರುಗಳೆರಡರ ಮಧ್ಯೆ ಢಿಕ್ಕಿ ಸಂಭವಿಸಿದ ಪರಿಣಾಮ ಸ್ವಿಫ್ಟ್ ಕಾರಿ‌ನಲ್ಲಿದ್ದ ಇಬ್ಬರು ಗಾಯಗೊಂಡ ಘಟನೆ ಗುರುವಾರ ಸಂಜೆ ಉಪ್ಪಿನಂಗಡಿ - ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಬಲ್ಯ ಜಂಕ್ಷನ್ ನಲ್ಲಿ ನಡೆದಿದೆ.

ಗಾಯಾಳುಗಳನ್ನು ಬೆಳ್ತಂಗಡಿ ನಿವಾಸಿ ವಾಸುದೇವ ಗೋಖಲೆ (55) ಹಾಗೂ ಅವರ ಪತ್ನಿ ಪೂರ್ಣ ಗೋಖಲೆ (53) ಎಂದು ಗುರುತಿಸಲಾಗಿದೆ. ಕಡಬದಿಂದ ಬೆಳ್ತಂಗಡಿ ಕಡೆಗೆ ತೆರಳುತ್ತಿದ್ದ ಸ್ವಿಫ್ಟ್ ಕಾರು ಹಾಗೂ ವಿರುದ್ಧ ದಿಕ್ಕಿನಿಂದ ಆಗಮಿಸುತ್ತಿದ್ದ ಉಡುಪಿ ಜಿಲ್ಲೆಯ ಬೆಳ್ಮಣ್ ಮೂಲದವರಿದ್ದ ಮಹೀಂದ್ರಾ ಕೆಯುವಿ ನಡುವೆ ಬಲ್ಯ ಜಂಕ್ಷನ್ ನ ನೆಲ್ಯಾಡಿ ಕ್ರಾಸ್ ಬಳಿ ಢಿಕ್ಕಿಯುಂಟಾಗಿ ಎರಡೂ ಕಾರುಗಳು ಚರಂಡಿಗೆ ಬಿದ್ದಿವೆ.

ಸ್ಥಳಕ್ಕೆ ಕಡಬ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News