ಉಡುಪಿ: ನಾಳೆ ವಿಭಾಗೀಯ ಮಟ್ಟದ ದಸರಾ ಕ್ರೀಡಾಕೂಟ
Update: 2019-09-19 16:03 GMT
ಉಡುಪಿ, ಸೆ.19:ಜಿಲ್ಲಾಡಳಿತ, ಜಿಪಂ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ಮೈಸೂರು ವಿಭಾಗೀಯ ಮಟ್ಟದ ದಸರಾಕ್ರೀಡಾಕೂಟದ ಫುಟ್ಬಾಲ್, ಲಾನ್ಟೆನಿಸ್, ಈಜು, ಬಾಕ್ಸಿಂಗ್, ಆರ್ಚರಿ ಮತ್ತು ಫೆನ್ಸಿಂಗ್ ಸ್ಪರ್ಧೆಗಳು ಸೆ.21 ಮತ್ತು 22ರಂದು ಅಜ್ಜರಕಾಡು ಮಹಾತ್ಮಾ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿದೆ.
ಸ್ಪರ್ಧೆಯನ್ನು ಸೆ.22ರಂದು ಬೆಳಗ್ಗೆ 10 ಗಂಟೆಗೆ ಗೃಹ ಸಚಿವ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ಬೊಮ್ಮಾಯಿ ಉದ್ಘಾಟಿಸಲಿದ್ದು, ಈಜು ಸ್ಪರ್ಧೆಯನ್ನು ಮುಜರಾಯಿ, ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಉದ್ಘಾಟಿಸುವರು. ಉಡುಪಿ ಶಾಸಕ ಕೆ.ರಘುಪತಿ ಭಟ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.