ಸ್ವಂತ ಅತ್ತೆಯನ್ನು ಚೂರಿಯಿಂದ ಇರಿದು ಕೊಲೆಗೈದ ಅಳಿಯ

Update: 2019-09-20 16:13 GMT

ಮಧುಗಿರಿ, ಸೆ.20: ಸ್ವಂತ ಅಳಿಯನೇ ತನ್ನ ಅತ್ತೆಯನ್ನು ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ಇಂದು ರಾತ್ರಿ 07:30 ರ ಸುಮಾರಿಗೆ ತಾಲೂಕಿನ ಬಡವನಹಳ್ಳಿಯಲ್ಲಿ ನಡೆದಿದೆ.

ದೊಡ್ಡೇರಿ ಹೋಬಳಿಯ ಬಡವನಹಳ್ಳಿಯ ಸಾರ್ವಜನಿಕ ಆಸ್ಪತ್ರೆಯ ಬಳಿ ವಾಸವಾಗಿದ್ದ ಪ್ರೇಮಲತಾ (47) ಎಂಬವರೇ ಕೊಲೆಯಾದ ಮಹಿಳೆ.

ಪ್ರೇಮಲತಾ ಅವರ ಮಗಳು ಮಾನಸಳನ್ನು ಪ್ರದೀಪ್ ಕುಮಾರ್ ಎಂಬವರಿಗೆ ಮದುವೆ ಮಾಡಿಕೊಡಲಾಗಿತ್ತು. ಆದರೆ ಅವರಿಬ್ಬರ ವೈವಾಹಿಕ ಜೀವನದಲ್ಲಿ ಮನಸ್ತಾಪಗಳು ಕಾಣಿಸಿಕೊಂಡಿದ್ದು, ಇದೇ ಕಾರಣಕ್ಕೆ ಪ್ರದೀಪ್ ಕುಮಾರ್ ಮಾನಸಳ ತಾಯಿ ಪ್ರೇಮಲತಾರನ್ನು ಚೂರಿಯಿಂದ ಇರಿದು ಕೊಲೆಗೈದಿದ್ದಾನೆ ಎಂದು ತಿಳಿದುಬಂದಿದೆ.

ಬಡವನಹಳ್ಳಿ ಪೊಲೀಸರು ಪ್ರಕರಣ ದಾಖಲಿಸಿ, ಆರೋಪಿಯನ್ನು ಬಂಧಿಸಿ ಮುಂದಿನ ತನಿಖೆ ಕೈಗೊಂಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News