ಮೈಸೂರು: ಪತ್ರಕರ್ತರು, ಅವರ ಕುಟುಂಬಸ್ಥರಿಗೆ ಆಯುಷ್ಮಾನ್ ಆರೋಗ್ಯ ಕಾರ್ಡ್ ವಿತರಣೆ

Update: 2019-09-20 17:42 GMT

ಮೈಸೂರು,ಸೆ.20: ಮೈಸೂರು ಪತ್ರಕರ್ತರು ಮತ್ತು ಅವರ ಕುಟುಂಬದ ಸದಸ್ಯರಿಗೆ ಆಯುಷ್ಮಾನ್ ಆರೋಗ್ಯ ಕ್ಷೇಮಾಭಿಯಾನ ಹಲ್ತ್ ಕಾರ್ಡ್ ಉಚಿತ ವಿತರಣೆ ಕಾರ್ಯಕ್ರಮ ನಡೆಯಿತು.

ನಗರದ ಜಿಲ್ಲಾ ಪತ್ರಕರ್ತರ ಸಂಘದ ಶ್ರೀರಾಜಶೇಖರ ಕೊಟಿ ಸಭಾಂಗಣದಲ್ಲಿ ಕರ್ನಾಟಕ ಸರಕಾರದ ಸಹಕಾರದೊಂದಿಗೆ ಆಯುಷ್ಮಾನ್ ಯೋಜನೆಗೆ ನಟಿ, ನಿರ್ದೇಶಕಿ ರೂಪ ಆಯ್ಯರ್ ಚಾಲನೆ ನೀಡಿದರು. ಪತ್ರಕರ್ತರು ಹಾಗೂ ಕುಟುಂಬದ ಸದಸ್ಯರು ಸರತಿ ಸಾಲಿನಲ್ಲಿ ನಿಂತು ಆಯುಷ್ಮಾನ್ ಯೋಜನೆಯ ಕಾರ್ಡ್ ಪಡೆದುಕೊಂಡರು.

ಈ ಸಂದರ್ಭದಲ್ಲಿ ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಸಿ.ಕೆ.ಮಹೇಂದ್ರ, ಕಾರ್ಯದರ್ಶಿ ಕೆ.ಜೆ.ಲೋಕೇಶ್ ಬಾಬು, ಉಪಾಧ್ಯಕ್ಷ ಸುಬ್ರಹ್ಮಣ್ಯ, ಕಾರ್ಯಕಾರಿ ಸಮಿತಿ ಸದಸ್ಯರಾದ ರವಿ ಪಾಂಡವಪುರ, ಜಯಶಂಕರ್ ಬದನಗುಪ್ಪೆ, ಕಾರ್ಯದರ್ಶಿ ರಾಘವೇಂದ್ರ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News