ಪುತ್ತೂರು: ಅಬಕಾರಿ ಇಲಾಖೆ ವಶಪಡಿಸಿಕೊಂಡ ಮದ್ಯ ನಾಶ

Update: 2019-09-20 18:10 GMT

ಪುತ್ತೂರು: ಚುನಾವಣೆ ಸಂದರ್ಭದಲ್ಲಿ ಅಬಕಾರಿ ಇಲಾಖೆಯಿಂದ ದಾಳಿ ನಡೆಸಿ ವಿವಿಧ ಪ್ರಕರಣಗಳಲ್ಲಿ ವಶಪಡಿಸಿಕೊಂಡ ಮದ್ಯವನ್ನು ಶುಕ್ರವಾರ ಅಬಕಾರಿ ಪುತ್ತೂರು ಉಪವಿಭಾಗ ಕಚೇರಿಯಲ್ಲಿ ನಾಶ ಮಾಡಲಾಯಿತು.

ಚುನಾವಣೆ ಸಂದರ್ಭದಲ್ಲಿ ವಿವಿಧ ಪ್ರಕರಣಕ್ಕೆ ಸಂಬಂಧಿಸಿ ಸುಮಾರು 44.820 ಲೀಟರ್ ಮದ್ಯವನ್ನು ವಶಪಡಿಸಿಕೊಳ್ಳಲಾಗಿತ್ತು. ವಶಪಡಿಸಿಕೊಂಡ ಮದ್ಯವನ್ನು ಅಬಕಾರಿ ಉಪ ಅಧೀಕ್ಷಕ ಮುರಳಿಧರ ಹೆಚ್ ಓ ಅವರ ಸಮಕ್ಷಮದಲ್ಲಿ ಅಬಕಾರಿ ಉಪವಿಭಾಗ ಕಚೇರಿ ಆವರಣದಲ್ಲಿ ನಾಶ ಪಡಿಸಲಾಯಿತು. ಈ ಸಂದರ್ಭದಲ್ಲಿ ಅಬಕಾರಿ ನಿರೀಕ್ಷಕ ನವೀನ್ ಮತ್ತು ಸಿಬ್ಬಂದಿಗಳು, ಸಾರ್ವಜನಿಕರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News