ತ್ರಿವಿಧ ಜಿಗಿತ ಸ್ಪರ್ಧೆ: ಕರ್ನಾಟಕ ಪಬ್ಲಿಕ್ ಶಾಲಾ ವಿದ್ಯಾರ್ಥಿನಿ ಮಧುಪ್ರಿಯ ರಾಜ್ಯ ಮಟ್ಟಕ್ಕೆ ಆಯ್ಕೆ

Update: 2019-09-20 18:16 GMT

ಹನೂರು ಸೆ.20: ಸಮೀಪದ ಲೊಕ್ಕನಹಳ್ಳಿ ಗ್ರಾಮದ ಕರ್ನಾಟಕ ಪಬ್ಲಿಕ್ ಶಾಲೆಯ ವಿದ್ಯಾರ್ಥಿನಿ ಮಧುಪ್ರಿಯ ಜಿಲ್ಲಾ ಮಟ್ಟದಲ್ಲಿ ನಡೆದ ಕ್ರೀಡಾಕೂಟದ ತ್ರಿವಿಧ ಜಿಗಿತ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಗಳಿಸುವುದರ ಮೂಲಕ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾಳೆ.  

ಚಾಮರಾಜನಗರದಲ್ಲಿ ನಡೆದ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಮಧುಪ್ರಿಯ ತ್ರಿವಿಧ ಜಿಗಿತದಲ್ಲಿ ಪ್ರಥಮ ಸ್ಥಾನ ಗಳಿಸಿದ್ದು, ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ನಡೆಯುವ ರಾಜ್ಯ ಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಲಿದ್ದಾಳೆ.

ಸಾಧನೆಗೈದ ವಿದ್ಯಾರ್ಥಿನಿಯನ್ನು ಕ್ಷೇತ್ರ ಶಿಕ್ಷಣಾಧಿಕಾರಿ ಟಿ.ಆರ್ ಸ್ವಾಮಿ, ಶಾಲೆಯ ಶಿಕ್ಷಕರು ಹಾಗೂ ಶಾಲಾಭಿವೃದ್ದಿ ಸಮಿತಿ ಅಭಿನಂದಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News