ಅನರ್ಹ ಶಾಸಕರಿಗೆ ಚುನಾವಣೆಯಲ್ಲಿ ಸ್ಪರ್ಧಿಸಲು ಆಗುವುದಿಲ್ಲ: ರಾಜ್ಯ ಮುಖ್ಯ ಚುನಾವಣಾಧಿಕಾರಿ

Update: 2019-09-21 14:50 GMT

ಬೆಂಗಳೂರು, ಸೆ.21: ಅನರ್ಹಗೊಂಡಿತರುವ ಶಾಸಕರು ಉಪಚುನಾವಣೆಯಲ್ಲಿ ಸ್ಪರ್ಧಿಸಲು ಸಾಧ್ಯವಿಲ್ಲ ಎಂದು ರಾಜ್ಯ ಮುಖ್ಯ ಚುನಾವಣಾ ಅಧಿಕಾರಿ ಸಂಜೀವ್ ಕುಮಾರ್ ಹೇಳಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಅನರ್ಹ ಶಾಸಕರು ಚುನಾವಣೆಯಲ್ಲಿ ಸ್ಪರ್ಧಿಸುವುದಕ್ಕೆ ಸ್ಪೀಕರ್ ತಡೆ ಒಡ್ಡಿದ್ದಾರೆ. ಶಾಸಕರ ಮರುಪರಿಶೀಲನಾ ಅರ್ಜಿ ಸುಪ್ರೀಂ ಕೋರ್ಟ್‌ನಲ್ಲಿ ಇನ್ನೂ ಸ್ವೀಕೃತವಾಗಿಲ್ಲ. ಹೀಗಾಗಿ ಅನರ್ಹರು ಚುನಾವಣೆಯಲ್ಲಿ ಸ್ಪರ್ಧಿಸಲು ಆಗುವುದಿಲ್ಲ ಎಂದು ಹೇಳಿದರು.

ಉಪಚುನಾವಣೆ ನಡೆಯುವ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಚುನಾವಣಾ ನೀತಿ ಸಂಹಿತೆ ಇಂದಿನಿಂದಲೇ ಜಾರಿಗೆ ಬಂದಿದೆ ಎಂದು ಅವರು ಮಾಹಿತಿ ನೀಡಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News