ಬಿ.ಸಿ.ರೋಡಿನ ಸಮಗ್ರ ಸುಂದರೀಕರಣ ಯೋಜನೆಗೆ ವಿಶೇಷ ಅನುದಾನ ಒದಗಿಸುವಂತೆ ಸಿಎಂಗೆ ಮನವಿ

Update: 2019-09-21 13:21 GMT

ಬಂಟ್ವಾಳ, ಸೆ. 21: ಬಿ.ಸಿ.ರೋಡಿನ ಸಮಗ್ರ ಸುಂದರೀಕರಣ ಯೋಜನೆಗೆ ವಿಶೇಷ ಅನುದಾನವನ್ನು ನೀಡುವಂತೆ ಒತ್ತಾಯಿಸಿ ಶಾಸಕ ರಾಜೇಶ್ ನಾಯ್ಕ್ ಅವರನ್ನೊಳಗೊಂಡ ನಿಯೋಗ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಖುದ್ದು ಭೇಟಿಯಾಗಿ ಮನವಿ ಸಲ್ಲಿಸಿತು. 

ಈ ಯೋಜನೆಯ ಕುರಿತಂತೆ ಮಾಡಿದ ಮನವಿಗೆ ಸ್ಪಂದಿಸಿದ ಮುಖ್ಯಮಂತ್ರಿಯವರು, 5 ಕೋಟಿ ರೂ. ವಿಶೇಷ ಅನುದಾನವನ್ನು ಬಿಡುಗಡೆಗೆ ಸಂಬಂಧಿಸಿದ ಅಧಿಕಾರಿಗಳಿಗೆ ಆದೇಶಿಸಿದ್ದಾರೆ ಎಂದು ಶಾಸಕರು ಪತ್ರಿಕೆಗೆ ತಿಳಿಸಿದ್ದಾರೆ.

ನಿಯೋಗದಲ್ಲಿ ಮಾಜಿ ಸಚಿವ ನಾಗರಾಜ ಶೆಟ್ಟಿ, ಬಂಟ್ವಾಳ ಕ್ಷೇತ್ರ ಬಿಜೆಪಿ ಅಧ್ಯಕ್ಷ ದೇವದಾಸ ಶೆಟ್ಟಿ, ಪುರಸಭೆಯ ಹಿರಿಯ ಸದಸ್ಯ ಗೋವಿಂದ ಪ್ರಭು, ಬಿಜೆಪಿ ಮುಖಂಡ ಉದಯಕುಮಾರ್ ರಾವ್ ಬಂಟ್ವಾಳ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News