ಬಿಜೆಪಿ ಶಾಸಕನಿಂದ ದೌರ್ಜನ್ಯ ಆರೋಪ: ಆತ್ಮಹತ್ಯೆಗೆ ಯತ್ನಿಸಿದ ಪಕ್ಷದ ನಾಯಕಿ

Update: 2019-09-21 14:19 GMT
Photo: www.nationalheraldindia.com

ಬಿಜೆಪಿ ಶಾಸಕ ತನ್ನ ಮೇಲೆ ದೌರ್ಜನ್ಯವೆಸಗಿದ್ದಾನೆ ಮತ್ತು ತನ್ನ ಕುಟುಂಬದ ವಿರುದ್ಧ ಸುಳ್ಳು ಪ್ರಕರಣವನ್ನು ದಾಖಲಿಸಲಾಗಿದೆ ಎಂದು ಆರೋಪಿಸಿ ಬಿಜೆಪಿಯ ಮಹಿಳಾ ನಾಯಕಿಯೊಬ್ಬರು ಶಾಸಕನ ಮನೆ ಮುಂದೆ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಉತ್ತರ ಪ್ರದೇಶದ ದಿಯೋಬಂದ್ ನಲ್ಲಿ ನಡೆದಿದೆ ಎಂದು nationalheraldindia.com ವರದಿ ಮಾಡಿದೆ.

ಆತ್ಮಹತ್ಯೆಗೆ ಮುಂದಾದ ಮಹಿಳೆ ಶಶಿ ತ್ಯಾಗಿ ಜಿಲ್ಲಾ ಪಂಚಾಯತ್ ಸದಸ್ಯೆಯಾಗಿದ್ದಾರೆ.

ಬಿಜೆಪಿ ಶಾಸಕ ಕುನ್ವಾರ್ ಬ್ರಿಜೇಶ್ ಸಿಂಗ್ ಮನೆಯ ಮುಂದೆ ನಿಂತ ಮಹಿಳೆ ತನ್ನ ಮೈಮೇಲೆ ಸೀಮೆಎಣ್ಣೆ ಸುರಿದಿದ್ದು, ಬೆಂಕಿ ಹಚ್ಚಿಕೊಳ್ಳುವ ಮೊದಲು ಅಲ್ಲಿದ್ದ ಪೊಲೀಸ್ ಸಿಬ್ಬಂದಿ ಮತ್ತು ಪಕ್ಷದ ಕಾರ್ಯಕರ್ತರು ತಡೆದಿದ್ದಾರೆ. ನಂತರ ಆಕೆ ಸೀಮೆಎಣ್ಣೆಯನ್ನು ಕುಡಿದಿದ್ದು, ತಕ್ಷಣ ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಮಹಿಳೆಯ ಸ್ಥಿತಿ ಗಂಭೀರವಾಗಿದ್ದರಿಂದ ಆಕೆಯನ್ನು ಶಹರಾನ್ಪುರದ ಜಿಲ್ಲಾಸ್ಪತ್ರೆಗೆ ದಾಖಲಿಸುವಂತೆ ಸೂಚಿಸಲಾಗಿದೆ ಎಂದು ದಿಯೋಬಂದ್ ನ ವೈದ್ಯಾಧಿಕಾರಿ ಇಂದರ್ ರಾಜ್ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News