ಅಕ್ರಮ ಮರಳು ಅಡ್ಡೆಗೆ ದಾಳಿ: 30 ಲೋಡ್ ಮರಳು ವಶ

Update: 2019-09-21 16:03 GMT

ಮಂಗಳೂರು, ಸೆ.21: ನಗರದ ಕಲ್ಲಾಪು ಸಮೀಪ ಅಕ್ರಮವಾಗಿ ದಾಸ್ತಾನು ಮಾಡಲಾದ ಮರಳು ಅಡ್ಡೆಗೆ ನಗರ ಪೊಲೀಸರು ಮತ್ತು ಭೂವಿಜ್ಞಾನ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ 30 ಲೋಡ್ ಮರಳನ್ನು ವಶಪಡಿಸಿಕೊಂಡಿದ್ದಾರೆ.

ಕಲ್ಲಾಪು ನದಿ ತೀರದಲ್ಲಿ ಅಕ್ರಮವಾಗಿ ಮರಳು ದಾಸ್ತಾನಿರುವ ಬಗ್ಗೆ ನಗರ ಪೊಲೀಸರಿಗೆ ಖಚಿತ ಮಾಹಿತಿ ದೊರಕಿದ್ದು, ಈ ಹಿನ್ನೆಲೆಯಲ್ಲಿ ನಗರ ಕಾನೂನು ಸುವ್ಯವಸ್ಥಾ ವಿಭಾಗದ ಡಿಸಿಪಿ ಅರುಣಾಂಶುಗಿರಿ ನೇತೃತ್ವದ ತಂಡ ದಾಳಿ ನಡೆಸಿದೆ. ಈ ವೇಳೆ ಸುಮಾರು 30 ಲೋಡ್ ಮರಳು ಮತ್ತು 10 ದೋಣಿಗಳು ಪತ್ತೆಯಾಗಿದ್ದು ಅದನ್ನು ಮುಟ್ಟುಗೋಲು ಹಾಕಲಾಗಿದೆ. ಈಗಾಗಲೇ ಆರು ದೋಣಿಗಳನ್ನು ಸ್ಥಳಾಂತರಿಸಲಾಗಿದೆ.

ಕಾರ್ಯಾಚರಣೆಯಲ್ಲಿ ಕಂಕನಾಡಿ ನಗರ ಠಾಣೆಯ ಇನ್‌ಸ್ಪೆಕ್ಟರ್ ಅಶೋಕ್, ಗಣಿ ಮತ್ತು ಭೂವಿಜ್ಞಾನ ಇಲಾಖೆ ಪ್ರಭಾರ ಉಪನಿರ್ದೇಶಕಿ ಪದ್ಮಶ್ರೀ ಆರ್. ಮತ್ತಿತರರು ಅಕಾರಿಗಳು ಭಾಗವಹಿಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News