ಒಡಿಯೂರು ಶ್ರೀ ವಿವಿಧೋದ್ದೇಶ ಸೌಹಾರ್ದ ಸಹಕಾರಿಗೆ ಉತ್ತಮ ಸಹಕಾರಿ ಪ್ರಶಸ್ತಿ
ಮಂಗಳೂರು, ಸೆ.21: ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ನಿಯಮಿತ ಬೆಂಗಳೂರು ಇದರ 18ನೇ ವಾರ್ಷಿಕ ಸಾಮಾನ್ಯ ಸಭೆಯಲ್ಲಿ ಸೌಹಾರ್ದ ಸಹಕಾರಿ ಕ್ಷೇತ್ರದ 2018-2019ನೇ ಸಾಲಿನ ರಾಜ್ಯದ ಉತ್ತಮ ಸೌಹಾರ್ದ ಸಹಕಾರಿ ಪ್ರಶಸ್ತಿಯನ್ನು ಒಡಿಯೂರು ಶ್ರೀ ವಿವಿಧೋದ್ದೇಶ ಸೌಹಾರ್ದ ಸಹಕಾರಿ ನಿ.ಕ್ಕೆ ನೀಡಿ ಪುರಸ್ಕರಿಸಿದೆ.
ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿಯ ಅಧ್ಯಕ್ಷ ಬಿ.ಎಚ್ ಕೃಷ್ಣಾ ರೆಡ್ಡಿ, ಸಚಿವೆ ಶಶಿಕಲಾ ಜೊಲ್ಲೆ ಅಣ್ಣ ಸಾಹೇಬ್ ಮತ್ತು ಕ.ರಾ.ಸೌ.ಸಂ.ಸ.ನಿ ಇದರ ಮೈಸೂರು ಪ್ರಾಂತದ ನಿರ್ದೇಶಕ ಎಸ್.ಕೆ.ಮಂಜುನಾಥ್, ಎಚ್.ವಿ.ರಾಜೇವ್ ಮತ್ತು ವ್ಯವಸ್ಥಾಪಕ ನಿರ್ದೇಶಕ ಶರಣಗೌಡ ಜಿ. ಪಾಟೀಲ್ ಒಡಿಯೂರು ಶ್ರಿ ವಿವಿಧೋದ್ದೇಶ ಸೌಹಾರ್ದ ಸಹಕಾರಿಯ ಅಧ್ಯಕ್ಷ ಎ.ಸುರೇಶ್ ರೈಗೆ ಪ್ರಶಸ್ತಿ ಪ್ರದಾನ ಮಾಡಿದರು.
ಈ ಸಂದರ್ಭ ಒಡಿಯೂರು ಸಹಕಾರಿಯ ಆಡಳಿತ ಮಂಡಳಿಯ ನಿರ್ದೇಶಕ ಸೇರಾಜೆ ಗಣಪತಿ ಭಟ್, ಲಿಂಗಪ್ಪಗೌಡ ಪನೆಯಡ್ಕ, ದೇವಪ್ಪ ನೋಂಡ, ತಾರಾನಾಥ ಶೆಟ್ಟಿ, ಸಿಇಒ ಎಂ.ಉಗ್ಗಪ್ಪಶೆಟ್ಟಿ ಉಪಸ್ಥಿತರಿದ್ದರು.