ಮಂಗಳೂರು: ನಾಪತ್ತೆಯಾದವರ ಮಾಹಿತಿ ನೀಡಲು ಮನವಿ

Update: 2019-09-22 15:05 GMT

ಮಂಗಳೂರು, ಸೆ.22: ಬೊಂದೇಲ್ ಚರ್ಚ್ ಎದುರುಗಡೆಯ ಫ್ಲಾಟ್‌ನಲ್ಲಿ ವಾಸಿಸುತ್ತಿದ್ದ ಶ್ರೀಧರ್ ರೈ (47) ಎಂಬವರು ನಾಪತ್ತೆಯಾಗಿರುವ ಬಗ್ಗೆ ಕಾವೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಚಹರೆ: 5.6 ಅಡಿ, ಉದ್ದ ಮುಖ, ಸಪೂರ ಶರೀರ, ಬಿಳಿ ಮೈಬಣ್ಣ, ಪ್ಯಾಂಟ್-ಶರ್ಟ್ ಧರಿಸಿದ್ದಾರೆ. ಕನ್ನಡ, ತುಳು, ಇಂಗ್ಲಿಷ್, ಹಿಂದಿ, ಮಲೆಯಾಳಂ ಭಾಷೆ ಮಾತನಾಡುತ್ತಾರೆ.

ಈ ವ್ಯಕ್ತಿಯ ಬಗ್ಗೆ ಮಾಹಿತಿ ಸಿಕ್ಕವರು ನಗರ ನಿಯಂತ್ರಣ ಕೊಠಡಿ ಅಥವಾ ಕಾವೂರು ಪೊಲೀಸ್ ಠಾಣೆಗೆ ಮಾಹಿತಿ ನೀಡಬಹುದಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News