ಎಚ್‌ಸಿಎಲ್‌ನ ಶಿವ ನಡಾರ್ ಆರೆಸ್ಸೆಸ್ ವಿಜಯದಶಮಿ ಕಾರ್ಯಕ್ರಮದ ಮುಖ್ಯ ಅತಿಥಿ

Update: 2019-09-22 15:23 GMT

ನಾಗ್ಪುರ,ಸೆ.22: ಎಚ್‌ಸಿಎಲ್ ಸ್ಥಾಪಕಾಧ್ಯಕ್ಷ ಹಾಗೂ ಪದ್ಮಭೂಷಣ ವಿಜೇತ ಶಿವ ನಡಾರ್ ಅಕ್ಟೋಬರ್ 8ರಂದು ಮಹಾರಾಷ್ಟ್ರದಲ್ಲಿ ಸಂಘ ಪರಿವಾರ ಆಯೋಜಿಸುವ ವಿಜಯದಶಮಿ ಕಾರ್ಯಕ್ರಮದಲ್ಲಿ ಮುಖ್ಯಅಥಿತಿಯಾಗಿ ಭಾಗವಹಿಸಲಿದ್ದಾರೆ ಎಂದು ಆರೆಸ್ಸೆಸ್ ನಾಯಕರು ತಿಳಿಸಿದ್ದಾರೆ.

ಪ್ರತಿ ವರ್ಷ ನಡೆಯುವ ಈ ಕಾರ್ಯಕ್ರಮದಲ್ಲಿ ಸಂಘಪರಿವಾರದ ಮುಖ್ಯಸ್ಥ ಮಾಡುವ ಭಾಷಣದಲ್ಲಿ ಸಂಘಪರಿವಾರ ಮತ್ತು ಅದರ ಅಂಗ ಸಂಸ್ಥೆಗಳಿಗೆ ತನ್ನ ಮುಂದಿನ ವರ್ಷದ ಕಾರ್ಯಕ್ರಮಗಳ ಬಗ್ಗೆ ತಿಳಿಸುವ ಕಾರಣದಿಂದ ಈ ಕಾರ್ಯಕ್ರಮವನ್ನು ರಾಜಕೀಯ ವಿಶ್ಲೇಷಕರು ಕುತೂಹಲದಿಂದ ಗಮನಿಸುತ್ತಾರೆ.

ಕಳೆದ ವರ್ಷ ನೋಬೆಲ್ ವಿಜೇತ ಮಕ್ಕಳ ಹಕ್ಕುಗಳ ಹೋರಾಟಗಾರ ಕೈಲಾಶ್ ಸತ್ಯರ್ಥಿಯವರು ಆರೆಸ್ಸೆಸ್ನ ವಿಜಯದಶಮಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News