ಚರಂಡಿಗೆ ಬಿದ್ದ ಬೈಕ್: ಸವಾರ ಮೃತ್ಯು

Update: 2019-09-22 16:11 GMT

ಕಾರ್ಕಳ, ಸೆ.22: ಬೈಕೊಂದು ಹತೋಟಿ ತಪ್ಪಿ ರಸ್ತೆ ಬದಿಯ ಚರಂಡಿಗೆ ಬಿದ್ದ ಪರಿಣಾಮ ಸವಾರ ಮೃತಪಟ್ಟ ಘಟುನೆ ಹಿರ್ಗಾನ ಚರ್ಚ್ ಸಮೀಪ ಸೆ.21ರಂದು ರಾತ್ರಿ 10.15ರ ಸುಮಾರಿಗೆ ನಡೆದಿದೆ.

ಮೃತರನ್ನು ಪ್ರಕಾಶ್ ಅಮೀನ್ ಎಂದು ಗುರುತಿಸಲಾಗಿದೆ. ಇವರು ತನ್ನ ಬೈಕಿನಲ್ಲಿ ಕಾರ್ಕಳ ಕಡೆಯಿಂದ ಹಿರ್ಗಾನ ಕಡೆಗೆ ಹೋಗುತ್ತಿದ್ದಾಗ ಬೈಕ್ ಹತೋಟಿ ತಪ್ಪಿರಸ್ತೆ ಬದಿಯ ಚರಂಡಿಗೆ ಬಿತ್ತೆನ್ನಲಾಗಿದೆ. ಇದರಿಂದ ಗಂಭೀರವಾಗಿ ಗಾಯಗೊಂಡ ಪ್ರಕಾಶ್ ಅಮೀನ್ ಕಾರ್ಕಳ ಖಾಸಗಿ ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟರು. ಈ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News