ಭಿಕ್ಷಾಟನೆ ನಿರತ ತಾಯಿ-ಮಗು ರಕ್ಷಣೆ

Update: 2019-09-23 17:43 GMT

ಮಂಗಳೂರು, ಸೆ.23: ಸುರತ್ಕಲ್‌ನಲ್ಲಿ ಎಂಟು ತಿಂಗಳ ಹೆಣ್ಣುಮಗು ಹಿಡಿದುಕೊಂಡು ಭಿಕ್ಷಾಟನೆ ನಡೆಸುತ್ತಿದ್ದ ಮಹಿಳೆಯನ್ನು ಪತ್ತೆಹಚ್ಚಿದ ಚೈಲ್ಡ್‌ಲೈನ್-1098 ಸೋಮವಾರ ರಕ್ಷಣೆ ಮಾಡಿದೆ.

ಸುರತ್ಕಲ್ ಮಹಾಲಿಂಗೇಶ್ವರ ದೇವಾಲಯದ ಬಳಿ ಸಿದ್ದಾಪುರ ಮೂಲದ ಮಹಿಳೆಯೊಬ್ಬರು ಮಗುವನ್ನು ಹಿಡಿದು ಭಿಕ್ಷೆ ಬೇಡುತ್ತಿರುವರ ಕುರಿತು ಸಾರ್ವಜನಿಕರೊಬ್ಬರು ಚೈಲ್ಡ್‌ಲೈನ್‌ಗೆ ಮಾಹಿತಿ ನೀಡಿದ್ದರು.

ಕೂಡಲೇ ಕಾರ್ಯಾಚರಣೆ ನಡೆಸಿದ ಚೈಲ್ಡ್‌ಲೈನ್ ತಂಡವು ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಮತ್ತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಸುರತ್ಕಲ್ ಠಾಣಾ ಪೊಲೀಸ್ ಸಿಬ್ಬಂದಿ ಸಹಕಾರದೊಂದಿಗೆ ಸ್ಥಳಕ್ಕೆ ಆಗಮಿಸಿ ಮಹಿಳೆಯೊಂದಿಗೆ ಮಗುವನ್ನು ರಕ್ಷಿಸಿ ಮಕ್ಕಳ ಕಲ್ಯಾಣ ಸಮಿತಿಗೆ ಹಾಜರುಪಡಿಸಿದರು. ಬಳಿಕ ಸೂಕ್ತ ಪುನರ್ವಸತಿ ಕಲ್ಪಿಸಲಾಗಿದೆ.

ಚೈಲ್ಡ್‌ಲೈನ್-1098 ಕೇಂದ್ರ ಸಂಯೋಜಕ ದೀಕ್ಷಿತ್ ಅಚ್ರಪ್ಪಾಡಿ, ಜಿಲ್ಲಾಮಕ್ಕಳ ರಕ್ಷಣಾ ಘಟಕದ ಅಧಿಕಾರಿ ಕುಮಾರ್ ಶೆಟ್ಟಿಗಾರ್, ಸಂಧ್ಯಾ, ರವಿಕಿರಣ್, ಮಿಥುನ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ನಾಗರತ್ನಾ, ಸುರತ್ಕಲ್ ಪೊಲೀಸ್ ಠಾಣೆಯ ದಾಮೋದರ್, ಮಾಯಾ, ತಿರುಪತಿ ಕಾರ್ಯಾಚರಣೆ ಭಾಗವಹಿಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News