ಮನೆಯಿಂದ ಕಳವು ಪ್ರಕರಣ: ಆರೋಪಿಯ ಸೆರೆ
Update: 2019-09-24 10:10 GMT
ಪುತ್ತೂರು, ಸೆ.24: ಕಳೆದ ಎರಡೂವರೆ ತಿಂಗಳ ಹಿಂದೆ ಅರ್ಯಾಪು ಗ್ರಾಮದ ದೇವಸ್ಯ ಎಂಬಲ್ಲಿ ಮನೆಯೊಂದರಿಂದ ಕಳವು ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಯನ್ನು ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಕಡಬ ತಾಲೂಕಿನ ಕೊಯ್ಲ ನಿವಾಸಿ ಇಬ್ರಾಹೀಂ ಕಲಂದರ್(31) ಬಂಧಿತ ಆರೋಪಿ.
ಜು.3ರಂದು ದೇವಸ್ಯ ನಿವಾಸಿ ರಂಜಿತ್ ರೈ ಎಂಬವರ ಮನೆಯಿಂದ ಮನೆಯಲ್ಲಿ ಯಾರೂ ಇಲ್ಲದ ವೇಳೆಯಲ್ಲಿ ಬಾಗಿಲು ಮುರಿದು ಮನೆಯೊಳಗೆ ಕಪಾಟಿನಲ್ಲಿ ಇರಿಸಲಾಗಿದ್ದ ಚಿನ್ನ ಕಳವಾಗಿತ್ತು. ಈ ಬಗ್ಗೆ ಸಂಪ್ಯ ಠಾಣೆಗೆ ರಂಜಿತ್ ರೈ ದೂರು ನೀಡಿದ್ದರು. ತನಿಖೆ ಕೈಗೆತ್ತಿಕೊಂಡ ಪೊಲೀಸರು ಕಾರ್ಯಾಚರಣೆ ನಡೆಸಿ ವಿಟ್ಲದಲ್ಲಿ ಆರೋಪಿಯನ್ನು ವಶಕ್ಕೆ ಪಡೆದಿದ್ದರು.
ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯ ನ್ಯಾಯಾಂಗ ಬಂಧನ ವಿಧಿಸಿದೆ