ಹೆರಿಗೆ ನೋವಿನಿಂದ ಒದ್ದಾಡುತ್ತಿದ್ದ ಗರ್ಭಿಣಿಯನ್ನು ಸಕಾಲದಲ್ಲಿ ಆಸ್ಪತ್ರೆಗೆ ದಾಖಲಿಸಿದ ಪೊಲೀಸರು

Update: 2019-09-24 15:16 GMT

ಮೂಡುಬಿದಿರೆ: ಹೆರಿಗೆ ನೋವಿನಿಂದ ಒದ್ದಾಡುತ್ತಿದ್ದ ತುಂಬು ಗರ್ಭಿಣಿಯನ್ನು  ಮೂಡುಬಿದಿರೆ ಪೊಲೀಸರು ಸಕಾಲದಲ್ಲಿ ಆಸ್ಪತ್ರೆಗೆ ದಾಖಲಿಸಿ ಮಾನವೀಯತೆ ಮೆರೆದಿದ್ದಾರೆ. ಕ್ರಿಮಿನಲ್ ಪ್ರಕರಣವೊಂದಕ್ಕೆ ಸಂಬಂಧಿಸಿ ವಿಚಾರಣೆಗೆಂದು ಕಳೆದ ಶನಿವಾರ ಮೂಡುಬಿದಿರೆ ವೃತ್ತ ನಿರೀಕ್ಷಕ ಬಿ.ಎಸ್. ದಿನೇಶ್ ಕುಮಾರ್, ಎಸ್. ಐ ದೇಜಪ್ಪ ನೇತೃತ್ವದಲ್ಲಿ ಪೊಲೀಸರು ಗಂಟಾಲ್ಕಟ್ಟೆಯ ಮನೆಯೊಂದಕ್ಕೆ ತೆರಳಿದ್ದು ಅಲ್ಲಿದ್ದ ಮಹಿಳೆಯೋರ್ವರು ಹೆರಿಗೆ ನೋವಿನಿಂದ ಆಸ್ಪತ್ರೆಗೆ ತೆರಳಲು ವಾಹನವಿಲ್ಲದೇ ಸಂಕಟಪಡುತ್ತಿರುವುದನ್ನು ಗಮನಿಸಿದ್ದಾರೆ. ಕೂಡಲೇ ಗರ್ಭಿಣಿಯನ್ನು ತಮ್ಮ ಸಾಗರ್ ವಾಹನದಲ್ಲಿ ಆಸ್ಪತ್ರೆಗೆ ದಾಖಲಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News