ಮೂಡಿಗೆರೆ: ನಾಪತ್ತೆಯಾಗಿದ್ದ ಬಾಲಕ ಶವವಾಗಿ ಪತ್ತೆ

Update: 2019-09-24 17:09 GMT

ಚಿಕ್ಕಮಗಳೂರು, ಸೆ.24: ನಾಪತ್ತೆಯಾಗಿದ್ದ ಬಾಲಕನೋರ್ವ ಕೆರೆಯೊಂದರಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ಮೂಡಿಗೆರೆ ತಾಲೂಕಿನ ಕಾರ್‍ಬೈಲ್ ಗ್ರಾಮದಲ್ಲಿ ಮಂಗಳವಾರ ವರದಿಯಾಗಿದೆ.

ಜಿಲ್ಲೆಯ ಮೂಡಿಗೆರೆ ತಾಲೂಕಿನ ಕಾರ್‍ಬೈಲ್ ಗ್ರಾಮದ ನಿವಾಸಿಗಳಾದ ರಮೇಶ್ ಹಾಗೂ ಲಕ್ಷ್ಮೀ ಎಂಬವರ ಪುತ್ರನಾದ ಪ್ರೀತಂ(8) ಸೋಮವಾರ ಬೆಳಗ್ಗೆ ಮನೆಯಿಂದ ಹೊರಬಂದವನು ಮತ್ತೆ ಮನೆಗೆ ಹಿಂದಿರುಗದೇ ನಾಪತ್ತೆಯಾಗಿದ್ದ ಎಂದು ತಿಳಿದು ಬಂದಿದ್ದು, ಮಂಗಳವಾರ ಇದೇ ಗ್ರಾಮದಲ್ಲಿರುವ ಕೆರೆಯೊಂದರಲ್ಲಿ ಬಾಲಕನೋರ್ವನ ಶವ ತೇಲುತ್ತಿರುವುದನ್ನು ಕಂಡ ಸ್ಥಳೀಯರು ಶವವನ್ನು ಹೊರತೆಗದು ನೋಡಿದಾಗ ಮೃತ ಬಾಲಕ ಗ್ರಾಮದಿಂದ ನಾಪತ್ತೆಯಾಗಿದ್ದ ಪ್ರೀತಂ ಎಂದು ತಿಳಿದು ಬಂದಿದೆ.

ಸ್ಥಳೀಯರು ಪೊಲೀಸರಿಗೆ ಸುದ್ದಿ ಮುಟ್ಟಿಸಿದ್ದು, ಸ್ಥಳಕ್ಕೆ ಆಗಮಿಸಿದ ಮೂಡಿಗೆರೆ ಠಾಣೆಯ ಪೊಲೀಸರು ಸ್ಥಳ ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಬಾಲಕ ಮಂಗಳವಾರ ಬೆಳಗ್ಗೆ ಕೆರೆಗೆ ಇಳಿದು ನೀರಿನಲ್ಲಿ ಮುಳುಗಿ ಮೃತಪಟ್ಟಿರಬಹುದೆಂದು ಶಂಕಿಸಲಾಗಿದ್ದು, ಹೆಚ್ಚಿನ ಮಾಹಿತಿ ತನಿಖೆಯಿಂದ ತಿಳಿದು ಬರಬೇಕಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News