ಬಿಜೆಪಿಯಿಂದ ನಿರಂತರ ಸೇಡಿನ ರಾಜಕಾರಣ: ದೇವೇಗೌಡ

Update: 2019-09-25 05:20 GMT

ಹೊಸದಿಲ್ಲಿ, ಸೆ.25: ಕೇಂದ್ರ ಸರ್ಕಾರದ ದ್ವೇಷದ ರಾಜಕಾರಣ ಹೊಸದೇನಲ್ಲ. ಬಿಜೆಪಿ ವಿರೋಧಿಸುವವರ ವಿರುದ್ದ ನಿರಂತರ ಸೇಡಿನ ರಾಜಕಾರಣ ಮಾಡಲಾಗುತ್ತಿದೆ ಎಂದು ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಹೇಳಿದ್ದಾರೆ.

ದೆಹಲಿಯಲ್ಲಿ ಮಾತನಾಡಿದ ಅವರು, ಕಳೆದ ಐದು ವರ್ಷಗಳಿಂದ ಬಿಜೆಪಿ ಸರ್ಕಾರ ಹೇಗೆ ನಡೆದುಕೊಳ್ಳುತ್ತಿದೆ ಎಂಬುದನ್ನು ನಾನು ಹೇಳುವ ಅಗತ್ಯವಿಲ್ಲ. ಆದರೆ ಅಧಿಕಾರ ಯಾರಿಗೂ ಶಾಶ್ವತವಲ್ಲ ಎಂಬುದನ್ನು ಅಧಿಕಾರದಲ್ಲಿರುವವರು ಮರೆಯಬಾರದು ಎಂದು ಎಚ್ಚರಿಸಿದರು.

ಡಿಕೆಶಿ ಇಂದು ಬಿಡುಗಡೆ: ದೇವೇಗೌಡ ವಿಶ್ವಾಸ

ಇದೇ ವೇಳೆ ದೇವೇಗೌಡರನ್ನು ಭೇಟಿಯಾದ ಸಂಸದ ಡಿ.ಕೆ.ಸುರೇಶ್ ಜತೆ ಚರ್ಚಿಸಿದ ದೇವೇಗೌಡರು, ಒಳ್ಳೆಯ ತೀರ್ಥ ಕ್ಷೇತ್ರದಲ್ಲಿ ಪೂಜೆ ಮಾಡಿಸಿಕೊಂಡು ಬಂದಿದ್ದೇನೆ. ದೇವರ ದಯೆಯಿಂದ ಡಿ.ಕೆ.ಶಿವಕುಮಾರ್ ಇವತ್ತು  ಬಿಡುಗಡೆಯಾಗುವ ವಿಶ್ವಾಸವಿದೆ ಎಂದರು.

ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡುವ ಉದ್ದೇಶದಿಂದ ದೆಹಲಿಗೆ ಬಂದಿದ್ದೆ. ಆದರೆ ಎರಡು ದಿನ ಮೊದಲೇ ಅನುಮತಿ ಪಡೆಯಬೇಕೆಂದು ಜೈಲು ಅಧಿಕಾರಿಗಳು ಹೇಳಿದ ಕಾರಣ ಅವರನ್ನು ಭೇಟಿಯಾಗಲು ಸಾಧ್ಯವಾಗಲಿಲ್ಲ ಎಂದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News