ಪ್ರಚೋದನಾತ್ಮಕವಾಗಿ ಮಾತನಾಡಿದ ಆರೋಪ: ಮಂಗಳೂರಿನ ಮಾಲ್ ನಲ್ಲಿ ಯುವಕನಿಗೆ ಹಲ್ಲೆ
Update: 2019-09-25 10:19 GMT
ಮಂಗಳೂರು, ಸೆ.25: ಪ್ರಚೋದನಾತ್ಮಕವಾಗಿ ಮಾತನಾಡಿದ್ದಾನೆ ಎಂದು ಆರೋಪಿಸಿ ನಗರದ ಖಾಸಗಿ ‘ಮಾಲ್’ವೊಂದರಲ್ಲಿ ಯುವಕನಿಗೆ ತಂಡವೊಂದು ಹಲ್ಲೆಗೈದ ಘಟನೆ ಬುಧವಾರ ನಡೆದಿದೆ.
ಈ ಬಗ್ಗೆ ಯುವಕ ನೀಡಿದ ದೂರಿನಂತೆ ಪಾಂಡೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ.
ಬಂಟ್ವಾಳ ತಾಲೂಕಿನ ಮಂಜುನಾಥ್ ಹಲ್ಲೆಗೊಳಗಾದ ಯುವಕ. ‘ಚಹಾ’ ಕುಡಿಯುವ ವೇಳೆ ಮಾತಿಗೆ ಮಾತು ಬೆಳೆದು ಹಲ್ಲೆಯಾಗಿದೆ ಎಂದು ಪೊಲೀಸರು ತಿಳಿಸಿದ್ದು, ವೀಡಿಯೋ ಆಧಾರದಲ್ಲಿ ಹಲ್ಲೆಗೈದವರ ವಿರುದ್ಧ ಕ್ರಮ ಜರಗಿಸಲಾಗುವುದು ಎಂದು ತಿಳಿಸಿದ್ದಾರೆ.
ಹಲ್ಲೆಗೈದ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. “ಇದು ಹಿಂದೂ ರಾಷ್ಟ್ರ, ಮುಸ್ಲಿಮರು ಇಲ್ಲಿಗೆ ಬರಬಾರದು” ಎಂದು ಯುವಕ ಪ್ರಚೋದನಾತ್ಮಕವಾಗಿ ಮಾತನಾಡಿದ್ದಾನೆ, ಇದೇ ಕಾರಣದಿಂದ ಆತನ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ವಿಡಿಯೋ ಜೊತೆ ವೈರಲ್ ಆಗಿರುವ ಆಡಿಯೋದಲ್ಲಿ ಆರೋಪಿಸಲಾಗಿದೆ.