ಕೋಲಾರ: ಹಾಲಿ-ಮಾಜಿ ಶಾಸಕರ ನಡುವೆ, ಬೆಂಬಲಿಗರ ಮಧ್ಯೆ ವಾಗ್ವಾದ
Update: 2019-09-25 13:13 GMT
ಕೋಲಾರ, ಸೆ.25: ಹಾಲಿ ಹಾಗೂ ಮಾಜಿ ಶಾಸಕರ ನಡುವೆ ವಾಗ್ವಾದ ನಡೆಸಿದ್ದಲ್ಲದೇ, ಎರಡೂ ಕಡೆಯ ಬೆಂಬಲಿಗರ ನಡುವೆ ಮಾತಿನ ಚಕಮಕಿ ನಡೆಯಿತು.
ತಾಲೂಕು ಟಿಎಪಿಸಿಎಂಎಸ್ ವಾರ್ಷಿಕ ಸರ್ವ ಸದಸ್ಯರ ಸಭೆಯಲ್ಲಿ ಘಟನೆ ನಡೆಡಿದ್ದು, ಅಭಿವೃದ್ಧಿ ವಿಚಾರದಲ್ಲಿ ಹಾಲಿ ಮತ್ತು ಮಾಜಿ ಶಾಸಕರ ನಡುವೆ ವಾಗ್ವಾದ ನಡೆದಿದೆ ಎನ್ನಲಾಗಿದೆ.
ಜಿಲ್ಲೆ ಬಂಗಾರಪೇಟೆ ಪಟ್ಟಣದಲ್ಲಿರುವ ಟಿಎಪಿಸಿಎಂಎಸ್ ಸೊಸೈಟಿಯಲ್ಲಿ ವಾರ್ಷಿಕ ಸರ್ವ ಸದಸ್ಯರ ಸಭೆ ನಡೆಯುತ್ತಿತ್ತು. ಈ ಸಂದರ್ಭ ಹಾಲಿ ಶಾಸಕ ಎಸ್.ಎನ್.ನಾರಾಯಣಸ್ವಾಮಿ ಹಾಗೂ ಮಾಜಿ ಶಾಸಕ ಎಂ.ನಾರಾಯಣಸ್ವಾಮಿ ನಡುವೆ ವಾಗ್ವಾದ ನಡೆದಿದೆ. ಅಲ್ಲದೇ, ಶಾಸಕರ ಮಾತಿನಿಂದ ಪ್ರೇರಿತರಾದ ಬೆಂಬಲಿಗರೂ ಕೂಡಾ ಮಾತಿನ ಚಕಮಕಿ ನಡೆಸಿದರು ಎಂದು ತಿಳಿದುಬಂದಿದೆ. ಘಟನೆಯ ವಿಡಿಯೋ ವೈರಲ್ ಆಗಿದೆ.