ಮಂಗಳೂರು: ನಗರದ ಮಾಲ್ ಗಳ ಸುತ್ತಮುತ್ತ ಬಿಗಿ ಪೊಲೀಸ್ ಕಣ್ಗಾವಲು

Update: 2019-09-26 05:31 GMT

ಮಂಗಳೂರು, ಸೆ.26: ನಗರದ ಪಾಂಡೇಶ್ವರ ಸಮೀಪದ ಫಿಝಾ ಮಾಲ್ ನಲ್ಲಿ ಯುವಕನಿಗೆ ತಂಡವೊಂದು ಹಲ್ಲೆಗೈದ ಘಟನೆ ಬುಧವಾರ ನಡೆದಿದ್ದು, ಘಟನೆಗೆ ಸಂಬಂಧಿಸಿದಂತೆ ಇಂದು ನಗರದ ಮಾಲ್ ಗಳ ಸುತ್ತಮುತ್ತ ಬಿಗಿ ಪೊಲೀಸ್ ಕಣ್ಗಾವಲು ಹಾಕಲಾಗಿದೆ.

ಬಂಟ್ವಾಳ ತಾಲೂಕಿನ ಬಿ.ಸಿ.ರೋಡ್ ಸಮೀಪದ ಮಂಜುನಾಥ್ ಎಂಬಾತನಿಗೆ ವಿದ್ಯಾರ್ಥಿಗಳನ್ನು ಒಳಗೊಂಡ ತಂಡವೊಂದು ಕ್ಷುಲ್ಲಕ ವಿಚಾರಕ್ಕೆ ಮಾತಿಗೆ ಮಾತು ಬೆಳೆದು ಹಲ್ಲೆ ನಡೆಸಿತ್ತು ಎನ್ನಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಪಾಂಡೇಶ್ವರ ಪೊಲೀಸರು ಮೂವರನ್ನು ಬಂಧಿಸಿದ್ದರು.

ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಪರ ವಿರೋಧ ಚರ್ಚೆಗಳು ವ್ಯಾಪಕವಾಗಿತ್ತು. ಅಲ್ಲದೇ, ಘಟನೆಯನ್ನು ಖಂಡಿಸಿ ಗುರುವಾರ ಬೆಳಗ್ಗೆ ಎಲ್ಲ ಹಿಂದೂಪರ ಕಾರ್ಯಕರ್ತರು ಮಾಲ್ ಬಳಿ ಸೇರಬೇಕು ಎಂಬ ಸುದ್ದಿ ಹರಿದಾಡಿತ್ತು. ಅದರಂತೆ ನಗರದ ಮಾಲ್ ಗಳ ಸುತ್ತಮುತ್ತ ಪೊಲೀಸರು ಸೇರಿದ್ದು, ಬಿಗಿ ಪೊಲೀಸ್ ಕಣ್ಗಾವಲು ಹಾಕಲಾಗಿದೆ. ಮಾಲ್ ಗಳಿಗೆ ಬರುವ ಸಾರ್ವಜನಿಕರಿಗೆ ಯಾವುದೇ ತೊಂದರೆ ಆಗದಂತೆ ಕ್ರಮ ವಹಿಸಲಾಗಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News