ಮಾಲ್‌ನಲ್ಲಿ ಯುವಕನ ಮೇಲೆ ಹಲ್ಲೆ ಪ್ರಕರಣ: ಮತ್ತಿಬ್ಬರ ಬಂಧನ

Update: 2019-09-26 07:25 GMT

ಮಂಗಳೂರು, ಸೆ.26: ನಗರದ ಖಾಸಗಿ ಮಾಲ್‌ನಲ್ಲಿ ಯುವಕನಿಗೆ ತಂಡದಿಂದ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ 5 ಮಂದಿಯನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಆಯುಕ್ತ ಡಾ. ಹರ್ಷ ತಿಳಿಸಿದರು. 

ಮಂಗಳೂರು ದಕ್ಷಿಣ ಠಾಣಾ ವ್ಯಾಪ್ತಿಯಲ್ಲಿ ಮಂಜುನಾಥ ಎಂಬ ಯುವಕನೊಬ್ಬ ಮಾತನಾಡುತ್ತಿದ್ದ ಸಂದರ್ಭ ಯುವಕ ಗುಂಪೊಂದು ವಾಗ್ವಾದಕ್ಕಿಳಿದು ಮಂಜುನಾಥನ ಮೇಲೆ ಹಲ್ಲೆ ನಡೆಸಿತ್ತು. ಈ ಬಗ್ಗೆ ಪ್ರಕರಣ ದಾಖಲಿಸಿ ಇಬ್ಬರು ವಯಸ್ಕರು ಹಾಗೂ ಓರ್ವ ಬಾಲಾಪರಾಧಿಯನ್ನು ಬಂಧಿಸಲಾಗಿತ್ತು. ಇದೀಗ ಪ್ರಕರಣಕ್ಕೆ ಸಂಬಂಧಿಸಿ ಮತ್ತೆ ಇಬ್ಬರನ್ನು ತಡರಾತ್ರಿ ಬಂಧಿಸಲಾಗಿದೆ ಎಂದು ಅವರು ಹೇಳಿದರು.

ಪ್ರಚೋದನಕಾರಿಯಾಗಿ ಮಾತನಾಡಿದ ಬಗ್ಗೆ ದೂರು ದಾಖಲಾಗಿದೆಯೇ ಎಂಬ ಪ್ರಶ್ನೆಗೆ, ಈವರೆಗೆ ಯಾರೂ ಲಿಖಿತವಾಗಿ ದೂರು ನೀಡಿಲ್ಲ. ವೀಡಿಯೋದಲ್ಲಿ ಪೊಲೀಸರು ಸ್ವಯಂ ಪ್ರೇರಿತವಾಗಿ ದೂರು ದಾಖಲಿಸುವ ಅಂಶ ಕಂಡುಬಂದಿಲ್ಲ ಎಂದರು. ಮಂಗಳೂರು ನಗರದ ಸಾರ್ವಜಿನಿಕರ ಹಿತದೃಷ್ಟಿಯಿಂದ ನಗರದೆಲ್ಲೆಡೆ ಪೊಲೀಸ್ ರಕ್ಷಣೆಯನ್ನು ಒದಗಿಸಲಾಗಿದೆ ಎಂದು ಅವರು ತಿಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News