ಐಎಎಸ್ ಅಧಿಕಾರಿ ವರ್ಗಾವಣೆ
Update: 2019-09-26 16:34 GMT
ಬೆಂಗಳೂರು, ಸೆ.26: ರಾಜ್ಯ ಸರಕಾರವು ಐಎಎಸ್ ಅಧಿಕಾರಿಯೊಬ್ಬರನ್ನು ವರ್ಗಾವಣೆ ಮಾಡಿ ಗುರುವಾರ ಆದೇಶ ಹೊರಡಿಸಿದೆ.
ರಾಜ್ಯ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಕ್ಯಾಪ್ಟನ್ ಡಾ.ಕೆ.ರಾಜೇಂದ್ರ ಅವರನ್ನು ಆರ್.ರಾಮಚಂದ್ರನ್ ವರ್ಗಾವಣೆಯಿಂದ ತೆರವಾಗಿರುವ ಬಾಗಲಕೋಟೆಯ ಜಿಲ್ಲಾಧಿಕಾರಿ ಹಾಗೂ ಕೃಷ್ಣಾ ಮೇಲ್ದಂಡೆ ಯೋಜನೆಯ ಪ್ರಧಾನ ವ್ಯವಸ್ಥಾಪಕರನ್ನಾಗಿ ವರ್ಗಾವಣೆ ಮಾಡಲಾಗಿದೆ.