×
Ad

ಮಂಗಳೂರು: 'ಭಾರತ ಹಿಂದೂ ರಾಷ್ಟ್ರ' ಎಂದ ಯುವಕನ ವಿರುದ್ಧ ದೂರು ದಾಖಲು

Update: 2019-09-27 19:39 IST

ಬಂಟ್ವಾಳ, ಸೆ. 27: 'ಭಾರತ ಹಿಂದೂ ರಾಷ್ಟ್ರ' ಎಂದ ಯುವಕನ ವಿರುದ್ಧ ಬಂಟ್ವಾಳ ನಗರ ಠಾಣೆಯಲ್ಲಿ ಶುಕ್ರವಾರ ದೂರು ದಾಖಲಾಗಿದೆ.

ಬಿಮೂಡ ಗ್ರಾಮದ ಗೂಡಿನಬಳಿಯ ನಿವಾಸಿ ಅಬ್ದುಲ್ ರಹಿಮಾನ್ ಎಂಬವರು ಈ ದೂರು ನೀಡಿದ್ದು, ಸೆ. 25ರಂದು ಮಂಜುನಾಥ್ ಬಂಟ್ವಾಳ ಎಂಬಾತ ಮಂಗಳೂರಿನ ಮಾಲ್‍ವೊಂದರಲ್ಲಿ ದೇಶ ವಿರೋಧಿ ಹಾಗೂ ಸಂವಿಧಾನ ವಿರೋಧಿ ಹೇಳಿಕೆ ನೀಡಿದ್ದು, ಈತನ ವಿರುದ್ಧ ಕಾನೂನು ಕ್ರಮ ಜರಗಿಸುವಂತೆ ದೂರಿನಲ್ಲಿ ಒತ್ತಾಯಿಸಲಾಗಿದೆ.

ಈ ರೀತಿಯ ದೇಶ ದ್ರೋಹದ ಹೇಳಿಕೆಯಿಂದ ದೇಶದ ಮೂಲ ನಿವಾಸಿಗಳಾದ ಮುಸ್ಲಿಂ ಸಮುದಾಯಕ್ಕೆ ನೋವುಂಟಾಗಿದಲ್ಲದೆ, ಇದರಿಂದ ಮುಸ್ಲಿಮರ ಬದುಕುವ ಸ್ವಾತಂತ್ರ್ಯವನ್ನು ಪ್ರಶ್ನಿಸಿದಂತಾಗಿದ್ದು, ಇಂತಹ ಹೇಳಿಕೆ ನೀಡಿರುವ ಈತನ ವಿರುದ್ಧ ದೇಶ ದ್ರೋಹ ಪ್ರಕರಣ ದಾಖಲಿಸುವಂತೆ ಪೊಲೀಸ್ ದೂರಿನಲ್ಲಿ ತಿಳಿಸಲಾಗಿದೆ.

ಈ ಸಂಬಂಧ ಬಂಟ್ವಾಳ ನಗರ ಠಾಣೆಯಲ್ಲಿ ದೂರು ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News