×
Ad

ಗಾಂಧಿ ಗ್ರಾಮ ಪುರಸ್ಕಾರಕ್ಕೆ ಆಯ್ಕೆ

Update: 2019-09-28 21:56 IST

ಉಡುಪಿ, ಸೆ.28: ರಾಜ್ಯದಲ್ಲಿ ಉತ್ತಮ ಸಾಧನೆ ಮಾಡಿರುವ ಪ್ರತಿ ತಾಲೂಕಿಗೆ ಒಂದರಂತೆ ಗ್ರಾಪಂಗಳಿಗೆ ನೀಡುವ ಗಾಂಧಿ ಗ್ರಾಮ ಪುರಸ್ಕಾರಕ್ಕೆ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಕಡ್ತಲ, ಕುಂದಾಪುರ ತಾಲೂಕಿನ ಕುಂಭಾಶಿ, ಉಡುಪಿ ತಾಲೂಕಿನ ಆರೂರು ಗ್ರಾಪಂಗಳು ಆಯ್ಕೆಯಾಗಿವೆ.

ಈ ಪ್ರಶಸ್ತಿಗೆ ರಾಜ್ಯದಲ್ಲಿ ಒಟ್ಟು 175 ಗ್ರಾಪಂಗಳು ಆಯ್ಕೆಯಾಗಿದ್ದು, ಆಯ್ಕೆಯಾದ ಗ್ರಾಪಂಗಳಿಗೆ ಅ.2ರಂದು ಬೆಂಗಳೂರಿನ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ನಡೆಯುವ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News