×
Ad

ಕ್ರೀಡಾಪಟು ವಿಶ್ವನಾಥ ಗಾಣಿಗಗೆ ಅಭಿನಂದನೆ

Update: 2019-09-29 17:42 IST

ಉಡುಪಿ, ಸೆ.29: ಕೆನಡಾದಲ್ಲಿ ಇತ್ತೀಚೆಗೆ ನಡೆದ ಕಾಮನ್‌ವೆಲ್ತ್ ಅಥ್ಲೆಟಿಕ್ಸ್‌ನ ಪವರ್ ಲಿಫ್ಟಿಂಗ್ ವಿಭಾಗದಲ್ಲಿ ಎರಡು ಚಿನ್ನ ಹಾಗೂ ಎರಡು ಬೆಳ್ಳಿಯ ಪದಕ ಗೆದ್ದ ಕುಂದಾಪುರ ತಾಲೂಕು ದೇವಲ್ಕುಂದದ ಬಾಳಿಕೆರೆಯ ಕ್ರೀಡಾಪಟು ವಿಶ್ವನಾಥ ಭಾಸ್ಕರ್ ಗಾಣಿಗ ಅವರನ್ನು ಉಡುಪಿಯ ಮಲಬಾರ್ ಗೋಲ್ಡ್ ಹಾಗೂ ಡೈಮಂಡ್ ಸಂಸ್ಥೆಯ ವತಿಯಿಂದ ಶನಿವಾರ ಅಭಿನಂದಿಸಲಾಯಿತು.

ಈ ಸಂದರ್ಭದಲ್ಲಿ ಉದ್ಯಮಿ ವಿಶ್ವನಾಥ ಶೆಣೈ, ನ್ಯಾಯವಾದಿ ಬೈಕಾಡಿ ಸುಪ್ರಸಾದ್ ಶೆಟ್ಟಿ, ಮಲಬಾರ್ ಗೋಲ್ಡ್ ಮುಖ್ಯಸ್ಥ ಹಫೀಜ್ ರಹಮಾನ್ ಹಾಗು ರಾಘವೇಂದ್ರ ನಾಯಕ್ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News