ಯುವ ಸಾಹಿತಿ ಕಿಶೋರ್ ಎಕ್ಕಾರುಗೆ 'ದಸರಾ ಕಾವ್ಯ ಪುರಸ್ಕಾರ'

Update: 2019-09-29 15:40 GMT

ಬಜ್ಪೆ: ಅಖಿಲ ಭಾರತೀಯ ಕನ್ನಡ ಸಾಹಿತ್ಯ ಹಾಗೂ ಸಾಂಸ್ಕೃತಿಕ ಪರಿಷತ್ತು ಮತ್ತು ಗ್ರಾಮಾಂತರ ಬುದ್ಧಿ ಜೀವಿಗಳ ಬಳಗ ಸಂಸ್ಥೆಗಳು ಮೈಸೂರು ದಸರಾ ಹಬ್ಬದ ಅಂಗವಾಗಿ ಏರ್ಪಡಿಸಿದ್ದ ರಾಜ್ಯಮಟ್ಟದ  ಕವನ ಸ್ಪರ್ಧೆಯಲ್ಲಿ ಹೊರನಾಡ ಕನ್ನಡಿಗರ ವಿಭಾಗದಲ್ಲಿ ಕಿಶೋರ್ ಎಕ್ಕಾರು  ವಿಜೇತರಾಗಿ ರಾಜ್ಯ ಮಟ್ಟದ ದಸರಾ ಕಾವ್ಯ ಪುರಸ್ಕಾರಕ್ಕೆ  ಆಯ್ಕೆಯಾಗಿದ್ದಾರೆ.

ಪ್ರಶಸ್ತಿ ಪ್ರದಾನ  ಸಮಾರಂಭವು ನವೆಂಬರ್ ತಿಂಗಳಲ್ಲಿ ರಾಜ್ಯ ಮಟ್ಟದ ದಸರಾ ಹಾಗೂ ಕನ್ನಡ ರಾಜ್ಯೋತ್ಸವದ ಅಂಗವಾಗಿ ಮೈಸೂರಿನಲ್ಲಿ ನಡೆಯಲಿರುವ ಸಾಹಿತ್ಯುತ್ಸವದ ವೇದಿಕೆಯಲ್ಲಿ ನಡೆಯಲಿದೆ ಎಂದು ಸಂಸ್ಥೆಯ ಅಧ್ಯಕ್ಷರಾದ ಡಾ.ಬೇರ್ಯ ರಾಮ್ ಕುಮಾರ್ ತಿಳಿಸಿದ್ದಾರೆ.

 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News