ಮಾರಕಾಸ್ತ್ರಗಳಿಂದ ಕಡಿದು ವ್ಯಕ್ತಿಯ ಕೊಲೆ

Update: 2019-09-30 11:41 GMT

ಹಾಸನ, ಸೆ.30: ಹಳೆ ದ್ವೇಷಕ್ಕೆ ಸಂಬಂಧಿಸಿದಂತೆ ಗಾರೆ ಕೆಲಸ ಮಾಡುವ ವ್ಯಕ್ತಿಯೋರ್ವನನ್ನು ಕೊಲೆ ಮಾಡಿ ಪರಾರಿಯಾಗಿರುವ ಘಟನೆ ನಗರದ ಬೀರನಹಳ್ಳಿ ಕೆರೆ ಬಳಿ ರವಿವಾರ ರಾತ್ರಿ ಸಂಭವಿಸಿದೆ. 

ಕೊಲೆಯಾದ ವ್ಯಕ್ತಿ ಹಾಸನ ತಾಲೂಕಿನ ಶಾಂತಿಗ್ರಾಮ ಸಮೀಪದ ಚಿಕ್ಕಗೇಣಿಗೆರೆ ಗ್ರಾಮದ ಗಾರೆ ಕೆಲಸ ಮಾಡುವ ರಮೇಶ್ (36) ಎಂದು ತಿಳಿದು ಬಂದಿದೆ. ಬೀರನಹಳ್ಳಿ ಕೆರೆಯ ರಾಘವೇಂದ್ರ ಕಾಲೋನಿ ಬಳಿ ರಾತ್ರಿ ದ್ವಿಚಕ್ರ ವಾಹನದಲ್ಲಿ ಬರುತ್ತಿದ್ದ ಸಮಯದಲ್ಲಿ ನಾಲ್ವರ ತಂಡವೊಂದು ರಸ್ತೆ ಮಧ್ಯೆ ಅಡ್ಡಗಟ್ಟಿ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ, ಕೊಲೆಗೈದು ಅಲ್ಲಿಂದ ಕಾಲ್ಕಿತ್ತಿದ್ದಾರೆ ಎನ್ನಲಾಗಿದೆ.

ಕೊಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಹಳೆ ದ್ವೇಷ, ಬಡ್ಡಿ ವ್ಯವಹಾರಕ್ಕೆ ಸಂಬಂಧಿಸಿದಂತೆ ಕೊಲೆ ನಡೆದಿದೆ ಎಂದು ಶಂಕಿಸಲಾಗಿದೆ. ಬಡಾವಣೆ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿ ಮುಂದಿನ ತನಿಖೆ ಕೈಗೊಂಡಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News