ಮಹಾರಾಷ್ಟ್ರ ವಿಧಾನಸಭೆ ಚುನಾವಣೆ: ಬಿಜೆಪಿ-ಶಿವಸೇನೆ ಸೀಟು ಹಂಚಿಕೆ ಸೂತ್ರ ಸಿದ್ಧ

Update: 2019-09-30 17:02 GMT

ಮುಂಬೈ, ಸೆ.30: ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯಲ್ಲಿ ಮೈತ್ರಿಕೂಟ ರಚಿಸಿಕೊಂಡಿರುವ ಬಿಜೆಪಿ ಹಾಗೂ ಶಿವಸೇನೆ ಸ್ಥಾನ ಹಂಚಿಕೆ ಸೂತ್ರವನ್ನು ಅಂತಿಮಗೊಳಿಸಿವೆ ಎಂದು ಹಿರಿಯ ಬಿಜೆಪಿ ಮುಖಂಡ ಚಂದ್ರಕಾಂತ್ ಪಾಟೀಲ್ ಹೇಳಿದ್ದಾರೆ.

 ಜಂಟಿ ಹೇಳಿಕೆಯಲ್ಲಿ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಹಾಗೂ ಶಿವಸೇನೆಯ ಅಧ್ಯಕ್ಷ ಉದ್ಧವ್ ಠಾಕ್ರೆ ಸ್ಥಾನ ಹಂಚಿಕೆಯ ವಿವರ ಪ್ರಕಟಿಸಲಿದ್ದಾರೆ ಎಂದವರು ಹೇಳಿದ್ದಾರೆ.

 ಉದ್ಧವ್ ಠಾಕ್ರೆ ಪಕ್ಷದ ಅಧಿಕೃತ ಅಭ್ಯರ್ಥಿಗಳಿಗೆ ಎ-ಬಿ ಫಾರ್ಮ್‌ಗಳನ್ನು ಹಸ್ತಾಂತರಿಸಿದ ಮರುದಿನ ಬಿಜೆಪಿಯಿಂದ ಈ ಘೋಷಣೆ ಹೊರಬಿದ್ದಿದೆ. ಉದ್ಧವ್ ಠಾಕ್ರೆಯ ಪುತ್ರ ಆದಿತ್ಯ ಠಾಕ್ರೆಯ ಹೆಸರೂ ಶಿವಸೇನೆಯ ಅಧಿಕೃತ ಅಭ್ಯರ್ಥಿಗಳ ಪಟ್ಟಿಯಲ್ಲಿದೆ. ಆದಿತ್ಯ ಠಾಕ್ರೆ ಚುನಾವಣೆಯಲ್ಲಿ ಸ್ಪರ್ಧಿಸುವ ಠಾಕ್ರೆ ಕುಟುಂಬದ ಮೊತ್ತಮೊದಲ ವ್ಯಕ್ತಿಯಾಗಲಿದ್ದಾರೆ. ಅವರು ಮುಂಬೈಯ ವೊರ್ಲಿ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News