ದಸರಾ ಕ್ರೀಡಾಕೂಟಕ್ಕೆ ಖ್ಯಾತ ಬ್ಯಾಡ್ಮಿಂಟನ್ ಆಟಗಾರ್ತಿ ಪಿ.ವಿ.ಸಿಂಧೂ ಚಾಲನೆ
Update: 2019-10-01 17:56 GMT
ಮೈಸೂರು,ಅ.1: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಕ್ರೀಡಾಜ್ಯೋತಿಯನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಖ್ಯಾತ ಬ್ಯಾಡ್ಮಿಂಟನ್ ಆಟಗಾರ್ತಿ ಪಿ.ವಿ.ಸಿಂಧೂ ಅವರಿಗೆ ಹಸ್ತಾಂತರಿಸುವ ಮೂಲಕ ದಸರಾ ಕ್ರೀಡಾಕೂಟಕ್ಕೆ ಚಾಲನೆ ನೀಡಲಾಯಿತು.
ನಗರದ ಚಾಮುಂಡಿ ವಿಹಾರ ಕ್ರೀಡಾಂಗಣದಲ್ಲಿ ದಸರಾ ಕ್ರೀಡಾಕೂಟಕ್ಕೆ ಚಾಲನೆ ನೀಡಿದ ಪಿ.ವಿ.ಸಿಂಧೂ ಕ್ರೀಡಾಪಟುಗಳಿಗೆ ಶುಭ ಹಾರೈಸಿದರು. ಸೆ.29 ರಂದು ಚಾಮುಂಡಿ ಬೆಟ್ಟದಲ್ಲಿ ಕ್ರೀಡಾಜ್ಯೋತಿಗೆ ಚಾಲನೆ ನೀಡಲಾಗಿತ್ತು. ನಂತರ ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿ ಸಂಚರಿಸಿ ಬಂದ ಕ್ರೀಡಾ ಜ್ಯೋತಿಯನ್ನು ಇಂದು ಪಿ.ವಿ.ಸಿಂಧೂ ಅವರಿಗೆ ಹಸ್ತಾಂತರಿಸಲಾಯಿತು.
ರಾಜ್ಯದ ವಿವಿಧೆಡೆಗಳಿಂದ ಐದು ವಿಭಾಗಗಳಲ್ಲಿ ಸುಮಾರು 4 ಸಾವಿರ ಕ್ರೀಡಾಪಟುಗಳು ಭಾಗವಹಿಸಿದ್ದರು. ಕ್ರೀಡಾಪಟುಗಳಿಂದ ಗೌರವ ವಂದನೆಯನ್ನು ಪಿ.ವಿ.ಸಿಂಧೂ ಮತ್ತು ಗಣ್ಯರು ಸ್ವೀಕರಿಸಿದರು.
ಭಾರೀ ಮಳೆಯ ಕಾರಣದಿಂದ ಇಂದು ನಡೆಯಬೇಕಿದ್ದ ಕ್ರೀಡಾಕೂಟಗಳನ್ನು ನಾಳೆಗೆ ಮುಂದೂಡಲಾಯಿತು.