ಮಾವನ ಅಂತ್ಯ ಸಂಸ್ಕಾರಕ್ಕೆ ಬಂದಿದ್ದ ವ್ಯಕ್ತಿ ರಸ್ತೆ ಅಪಘಾತಕ್ಕೆ ಬಲಿ

Update: 2019-10-01 18:23 GMT

ಚಿಕ್ಕಮಗಳೂರು, ಅ.1: ತನ್ನ ಮಾವನ ಅಂತ್ಯಸಂಸ್ಕಾರಕ್ಕಾಗಮಿಸಿ ಊರಿಗೆ ಹಿಂದಿರುಗಲು ಬಸ್‍ಗೆ ಕಾಯುತ್ತಿದ್ದ ವ್ಯಕ್ತಿಗೆ ಕಾರೊಂದು ಢಿಕ್ಕಿ ಹೊಡೆದು ಸ್ಥಳದಲ್ಲೇ ಮೃತಪಟ್ಟ ಘಟನೆ ಮಂಗಳವಾರ ಬೆಳಗಿನ ಜಾವ ಜಿಲ್ಲೆಯ ಬಾಳೆಹೊನ್ನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವರದಿಯಾಗಿದೆ.

ಮೃತ ವ್ಯಕ್ತಿಯನ್ನು ಸುರೇಶ್(47) ಎಂದು ಗುರುತಿಸಲಾಗಿದ್ದು, ಇವರು ಸೋಮವಾರ ಚಿಕ್ಕಮಗಳೂರು ತಾಲೂಕಿನ ಹುಣಸೇಹಳ್ಳಿ ಗ್ರಾಮದಲ್ಲಿ ತನ್ನ ಮಾವ ಮೃತಪಟ್ಟಿದ್ದರಿಂದ ಅವರ ಅಂತ್ಯಸಂಸ್ಕಾರಕ್ಕೆ ಆಗಮಿಸಿದ್ದರು. ರಾತ್ರಿ ಅಂತ್ಯಸಂಸ್ಕಾರದಲ್ಲಿ ಪಾಲ್ಗೊಂಡಿದ್ದ ಸುರೇಶ್ ಬೆಳಗಾಗುತ್ತಲೇ ತನ್ನೂರಿಗೆ ಹಿಂದಿರುಗಲು ಹುಣಸೇಹಳ್ಳಿ ಗ್ರಾಮದಲ್ಲಿ ಬಸ್‍ಗಾಗಿ ಕಾಯುತ್ತಿದ್ದರು. ಈ ವೇಳೆ ಬಾಳೆಹೊನ್ನೂರು ಕಡೆಯಿಂದ ಅತೀವೇಗವಾಗಿ ಬಂದ ಕಾರು ಚಾಲಕನ ನಿಯಂತ್ರಣ ತಪ್ಪಿ ಸುರೇಶ್‍ಗೆ ಢಿಕ್ಕಿ ಹೊಡೆದಿದೆ. ಕಾರು ಗುದ್ದಿದ ರಭಸಕ್ಕೆ ಸುರೇಸ್ ತಲೆ ತೀವ್ರ ಪೆಟ್ಟು ಬಿದ್ದ ಪರಿಣಾಮ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆಂದುಯ ತಿಳಿದು ಬಂದಿದೆ. 

ಘಟನೆ ಸಂಬಂಧ ಬಾಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News