ಬಿಎಸ್‌ವೈರನ್ನು ಬಿಜೆಪಿ ತುಳಿಯುತ್ತಿದೆ: ಮಾಜಿ ಸಚಿವ ಶಿವರಾಜ ತಂಗಡಗಿ

Update: 2019-10-02 15:05 GMT

ಕೊಪ್ಪಳ, ಅ.2: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪಅವರನ್ನು ತುಳಿಯಲು ಬಿಜೆಪಿಯವರು ಸಿದ್ಧವಾಗಿದ್ದು, ಯಡಿಯೂರಪ್ಪ ಅವರನ್ನು ಹರಕೆಯ ಕುರಿಯನ್ನಾಗಿ ಮಾಡುತ್ತಿದ್ದಾರೆಂದು ಮಾಜಿ ಸಚಿವ ಶಿವರಾಜ ತಂಗಡಗಿ ಆರೋಪಿಸಿದರು.

ಬುಧವಾರ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಯಡಿಯೂರಪ್ಪ ಮುಖ್ಯಮಂತ್ರಿ ಆಗಿದ್ದು, ಪ್ರಧಾನಿ ನರೇಂದ್ರ ಮೋದಿ, ಸಂಘಪರಿವಾರಕ್ಕೆ ಇಷ್ಟವಿಲ್ಲ. ಹೀಗಾಗಿಯೇ, ಅವರನ್ನು ಸ್ವಪಕ್ಷದವರು ತುಳಿಯುತ್ತಿದ್ದಾರೆ ಎಂದು ಆಪಾದಿಸಿದರು.

ಯಡಿಯೂರಪ್ಪ ಇನ್ನೆಷ್ಟು ದಿನ ಮುಖ್ಯಮಂತ್ರಿಯಾಗಿ ಮುಂದುವರೆಯುತ್ತಾರೋ ಗೊತ್ತಿಲ್ಲ ಎಂದ ಅವರು, ಬಿಜೆಪಿಯನ್ನು ಆ ಪಕ್ಷದವರೇ ಮುಳುಗಿಸುತ್ತಾರೆ. ಸರ್ವರಿಗೂ ಸಮಬಾಳು, ಸರ್ವರಿಗೂ ಸಮಪಾಲು ಎಂಬ ತತ್ವದಡಿ ಹಿಂದಿನ ಸಿದ್ದರಾಮಯ್ಯ ನೇತೃತ್ವದ ಸರಕಾರ ಗಣತಿ ಮಾಡಿದ್ದು, ಇದು ಉಪಯೋಗ ಆಗುವಂತೆ ಯಡಿಯೂರಪ್ಪ ಸರಕಾರ ನೋಡಿಕೊಳ್ಳಲಿ ಎಂದು ತಿಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News