ಬಸ್ ಉರುಳಿ 30ಕ್ಕೂ ಹೆಚ್ಚು ಗಾರ್ಮೆಂಟ್ಸ್ ನೌಕರರಿಗೆ ಗಾಯ

Update: 2019-10-03 18:04 GMT

ಮಂಡ್ಯ, ಅ.3: ಗಾರ್ಮೆಂಟ್ಸ್ಗೆ ಮಹಿಳಾ ನೌಕರರನ್ನು ಕರೆದೊಯ್ಯುತ್ತಿದ್ದ ಬಸ್ ಪಲ್ಟಿಯಾಗಿ 30ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಮದ್ದೂರು ತಾಲೂಕಿನ ಹಾಗಲಹಳ್ಳಿ ಗ್ರಾಮದ ಬಳಿ ಗುರುವಾರ ಬೆಳಗ್ಗೆ ನಡೆದಿದೆ.

ಸೋಮನಹಳ್ಳಿಯಲ್ಲಿರುವ ಗಾಮೆರ್ಂಟ್ಸ್‍ಗೆ ವಿವಿಧ ಗ್ರಾಮಗಳಿಂದ ಮಹಿಳಾ ಕಾರ್ಮಿಕರನ್ನು ಎಂದಿನಂತೆ ಕರೆದೊಯ್ಯುತ್ತಿದ್ದ ಬಸ್, ಹಾಗಲಹಳ್ಳಿ ಬಳಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಉರುಳಿ ಈ ಅವಘಡ ಸಂಭವಿಸಿದೆ.

ಕೂಡಲೆ ಸ್ಥಳಕ್ಕಾಗಮಿಸಿದ ಸುತ್ತಮುತ್ತಲ ಗ್ರಾಮಸ್ಥರು ಗಾಯಗೊಂಡವರನ್ನು ಮದ್ದೂರು ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿದರು. ಇವರಲ್ಲಿ ತೀವ್ರವಾಗಿ ಗಾಯಗೊಂಡಿರುವ ಕೆಲವರನ್ನು ಜಿಲ್ಲಾಸ್ಪತ್ರೆಗೆ ಸೇರಿಸಲಾಗಿದೆ.

ಮದ್ದೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News