ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ
Update: 2019-10-04 16:29 GMT
ಬ್ರಹ್ಮಾವರ, ಅ.4: ಮಾನಸಿಕ ಸ್ಥಿಮಿತ ಕಳೆದುಕೊಂಡು ಮೈಗೆ ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ ಯುವಕ ನೋರ್ವ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಉಪ್ಪೂರು ಗ್ರಾಮದ ಲಕ್ಷ್ಮೀನಗರ ಎಂಬಲ್ಲಿ ನಡೆದಿದೆ.
ಮೃತರನ್ನು ಲಕ್ಷ್ಮೀನಗರ ನಿವಾಸಿ ರವಿ(24) ಎಂದು ಗುರುತಿಸಲಾಗಿದೆ. ಅ.2ರಂದು ಮಧ್ಯರಾತ್ರಿ ಮದ್ಯ ಸೇವಿಸಿ ಮನೆಗೆ ಬಂದ ರವಿ, ಅಡುಗೆ ಮನೆ ಯಲ್ಲಿದ್ದ ಸೀಮೆಎಣ್ಣೆಯನ್ನು ಮೈಯಿಗೆ ಸುರಿದುಕೊಂಡು ಬೆಂಕಿ ಹಚ್ಚಿಕೊಂಡಿ ದ್ದರು. ಗಂಭೀರವಾಗಿ ಗಾಯಗೊಂಡ ಇವರು ಅ.3ರಂದು ಮಧ್ಯಾಹ್ನ ಚಿಕಿತ್ಸೆ ಫಲಕಾರಿಯಾಗದೆ ಮಂಗಳೂರು ವೆನ್ಲಾಕ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.