×
Ad

ಶಾಂತಿಭಂಗ: ಇಬ್ಬರ ವಿರುದ್ಧ ಪ್ರಕರಣ

Update: 2019-10-04 22:00 IST

ಉಡುಪಿ, ಅ.4: ಉಡುಪಿ ಸಿಟಿ ಬಸ್ ನಿಲ್ದಾಣದಲ್ಲಿ ಅ.3ರಂದು ಸಂಜೆ ವೇಳೆ ಬಸ್ ಟೈಮಿಂಗ್ ವಿಚಾರದಲ್ಲಿ ಪರಸ್ಪರ ಕೈ ಮಿಲಾಯಿಸುತ್ತ ಸಾರ್ವ ಜನಿಕರ ಶಾಂತಿಗೆ ಭಂಗವನ್ನುಂಟು ಮಾಡಿದ ಇಬ್ಬರು ಬಸ್ ನೌಕರರ ವಿರುದ್ದ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಅಬ್ದುಲ್ ಮುನಾಫ್ ಹಾಗೂ ಸಮೀರ್ ಎಂಬವರು ಅವಾಚ್ಯ ಶಬ್ದಗಳಿಂದ ಬೈದುಕೊಂಡು ಪರಸ್ಪರ ಕೈ ಕೈ ಮಿಲಾಯಿಸುತ್ತ ಸಾರ್ವಜನಿಕರ ಶಾಂತಿಗೆ ಭಂಗವನ್ನುಂಟು ಮಾಡಿ ಸ್ಥಳದಲ್ಲಿ ಭಯದ ವಾತಾವರಣವನ್ನು ನಿರ್ಮಿಸಿರುವು ದಾಗಿ ದೂರಿನಲ್ಲಿ ತಿಳಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News