ಕಡಬ : ಕೆರೆಗೆ ಹಾರಿ ಯುವಕ ಆತ್ಮಹತ್ಯೆ

Update: 2019-10-05 17:02 GMT

ಕಡಬ : ಯುವಕನೊರ್ವ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಶನಿವಾರ ಕಡಬ ತಾಲೂಕಿನ ಕೊಣಾಜೆಯಲ್ಲಿ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ಕೊಣಾಜೆ ಗ್ರಾಮದ ಹಾಲಾಡಿ ದಿ.ಶೇಷಪ್ಪ ಗೌಡ ಎಂಬವರ ಪುತ್ರ ಬಾಲಚಂದ್ರ (31) ಎಂದು ಗುರುತಿಸಲಾಗಿದೆ.

ಬೆಂಗಳೂರಿನ ಖಾಸಗಿ ಕಂಪೆನಿಯೊಂದರಲ್ಲಿ ಉದ್ಯೋಗದಲ್ಲಿದ್ದ ಬಾಲಚಂದ್ರ ನಾಲ್ಕು ದಿನಗಳ ಹಿಂದೆಯಷ್ಟೇ ಮನೆಗೆ ಬಂದಿದ್ದರು. ನವೆಂಬರ್ ತಿಂಗಳಿನಲ್ಲಿ ಮದುವೆ ನಿಗದಿಯಾಗಿದ್ದು, ಶನಿವಾರ ಮನೆಯಲ್ಲಿದ್ದ ಇವರು ತನ್ನ ಸಹೋದರನ ಮನೆಗೆ ಹೋಗುವ ದಾರಿಯಲ್ಲಿರುವ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಮೃತರು ತಾಯಿ ನೀಲಮ್ಮ ಹಾಗೂ ಮೂವರು ಸಹೋದರರು, ಓರ್ವ ಸಹೋದರಿಯನ್ನು ಅಗಲಿದ್ದಾರೆ. 

ಈ ಬಗ್ಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News