ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ರೈತ

Update: 2019-10-05 18:06 GMT

ತರೀಕೆರೆ, ಅ.5: ತಾಲೂಕಿನ ಲಕ್ಷ್ಮಿಸಾಗರ ಗ್ರಾಮದ ರೈತರೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ದಿಲೀಪ (45) ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ರೈತ. ದಿಲೀಪ ತನ್ನ ಮನೆಯ ಹಿಂಭಾಗದಲ್ಲಿರುವ ಹುಣಸೆ ಮರಕ್ಕೆ ಶನಿವಾರ ಬೆಳಗ್ಗೆ 6 ಗಂಟೆ ವೇಳೆಯಲ್ಲಿ ನೇಣು ಬಿಗಿದುಕೊಂಡಿದ್ದಾರೆ.

ದಿಲೀಪಗೆ ಎರಡು ಎಕರೆ ಅಡಿಕೆ ತೋಟವಿದೆ. ಕೆನರಾ ಬ್ಯಾಂಕ್ ನಲ್ಲಿ 4 ಲಕ್ಷ ರೂ. ಹಾಗೂ 3 ಲಕ್ಷ ರೂ. ಕೈ ಸಾಲ ಮಾಡಿದ್ದು, ಕಳೆದ ವರ್ಷಗಳಲ್ಲಿ ಕಂಡು ಬಂದ ತೀವ್ರ ಬರದಿಂದಾಗಿ ಅವರ ಬೋರ್ವೆಲ್ ಗಳು ವಿಫಲವಾಗಿತ್ತು ಎನ್ನಲಾಗಿದೆ. ಅಲ್ಲದೇ, ಈ ಬಾರಿ ಬೆಳೆ ಬಾರದೇ ಸಾಲ ಹೆಚ್ಚಾದ ಕಾರಣ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ತಿಳಿದುಬಂದಿದೆ. ಮೃತ ರೈತ ದಿಲೀಪ ಪತ್ನಿ ಹಾಗೂ ಓರ್ವ ಪುತ್ರನನ್ನು ಅಗಲಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News