ದೇವೇಗೌಡರಿಂದ ‘ಏಕತಾ ಪ್ರತಿಮೆ’ಯ ವೀಕ್ಷಣೆ: ಪ್ರಧಾನಿ ಮೋದಿ ಪ್ರತಿಕ್ರಿಯಿಸಿದ್ದು ಹೀಗೆ…

Update: 2019-10-06 14:28 GMT

ಹೊಸದಿಲ್ಲಿ, ಅ.6: ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ಗುಜರಾತಿನ ಕೇವಡಿಯಾದಲ್ಲಿರುವ ಏಕತಾ ಪ್ರತಿಮೆಗೆ ಭೇಟಿ ನೀಡಿದ ಬಳಿಕ ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರು ಸಂತಸವನ್ನು ವ್ಯಕ್ತಪಡಿಸಿದ್ದಾರೆ.

“ನಮ್ಮ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡಾಜಿ ಅವರು ಏಕತಾ ಪ್ರತಿಮೆಗೆ ಭೇಟಿ ನೀಡಿದ್ದು ಸಂತಸವನ್ನುಂಟು ಮಾಡಿದೆ” ಎಂದು ಮೋದಿ ರವಿವಾರ ಬೆಳಿಗ್ಗೆ ಟ್ವೀಟಿಸಿದ್ದಾರೆ.

ಭಾರತದ ಮೊದಲ ಉಪ ಪ್ರಧಾನಿ ಸರದಾರ್ ವಲ್ಲಭ್‌ಭಾಯಿ ಪಟೇಲ್ ಅವರ ಸ್ಮರಣಾರ್ಥ ನಿರ್ಮಿಸಲಾಗಿರುವ ಅವರ 182 ಮೀ.ಎತ್ತರದ ‘ಏಕತಾ ಪ್ರತಿಮೆ’ಯನ್ನು ಮೋದಿ ಕಳೆದ ವರ್ಷದ ಅಕ್ಟೋಬರ್‌ನಲ್ಲಿ ಅನಾವರಣಗೊಳಿಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News