'ಕಾಂಗ್ರೆಸ್‌ನಲ್ಲಿ ಬಣ ರಾಜಕೀಯ': ಮಾಜಿ ರಾಜ್ಯಸಭಾ ಸದಸ್ಯ ಎಚ್.ಹನುಮಂತಪ್ಪ ಮೌನ ಪ್ರತಿಭಟನೆ

Update: 2019-10-06 14:52 GMT

ಬೆಂಗಳೂರು, ಅ.6: ಕಾಂಗ್ರೆಸ್‌ನಲ್ಲಿ ಬಣ ರಾಜಕೀಯ ಕೈ ಬಿಡಬೇಕು ಎಂದು ಒತ್ತಾಯಿಸಿ ಮಾಜಿ ರಾಜ್ಯಸಭಾ ಸದಸ್ಯ ಎಚ್.ಹನುಮಂತಪ್ಪ ನಗರದ ಕೆಪಿಸಿಸಿ ಕಚೇರಿ ಎದುರು ಮೌನ ಪ್ರತಿಭಟನೆ ನಡೆಸಿದರು.

ರವಿವಾರ ನಗರದ ಕ್ವೀನ್ಸ್ ರಸ್ತೆಯಲ್ಲಿರುವ ಕೆಪಿಸಿಸಿ ಬಳಿ ಮೌನ ಪ್ರತಿಭಟನೆ ನಡೆಸಸಿದ ಅವರು, ಕಾಂಗ್ರೆಸ್ ಸದ್ಯದ ಪರಿಸ್ಥಿತಿ ಬಗ್ಗೆ ತಮ್ಮ ಅಸಮಾಧಾನ ಹೊರ ಹಾಕಿದರು.

ಕಾಂಗ್ರೆಸ್‌ನವರಿಗೆ ಪಕ್ಷ ಉಳಿಸುವ ಬುದ್ಧಿ ಕೊಡು ಭಗವಂತ, ಸಬ್ ಕೋ ಸನ್ಮತಿ ದೇ ಭಗವಾನ್ ಎಂಬ ಗಾಂಧೀಜಿಯವರ ಘೋಷ ವಾಕ್ಯದ ಬ್ಯಾನರ್ ಹಾಕಿಕೊಂಡು ಪ್ರತಿಭಟನೆ ನಡೆಸಿದರು. ಈ ವೇಳೆ ಪಕ್ಷದ ನಾಯಕರು ನಡೆದುಕೊಳ್ಳುತ್ತಿರುವ ರೀತಿಗೆ ಆಕ್ರೋಶ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್‌ನಲ್ಲಿ ಯಾವುದೂ ಸರಿ ಇಲ್ಲ ಎಂಬ ಭಾವನೆ ಸಾರ್ವಜನಿಕರಲ್ಲಿದೆ. ಕಾಂಗ್ರೆಸ್‌ನವರೇ ಪಕ್ಷದ ವಿರುದ್ಧ ಮಾತನಾಡುತ್ತಿದ್ದಾರೆ. ಅವರೆಲ್ಲ ಒಗ್ಗಟ್ಟಾಗಿ ಕೆಲಸ ಮಾಡಬೇಕು. ಆ ಮೂಲಕ ಕಾಂಗ್ರೆಸ್ ಪಕ್ಷವನ್ನು ಬಲ ಪಡಿಸಬೇಕು. ನನ್ನದು ಯಾರ ವಿರುದ್ಧದ ಹೋರಾಟವಲ್ಲ. ಪಕ್ಷ ಬಲವರ್ಧನೆಯಾಗಬೇಕು ಎಂಬುದು ನನ್ನ ಅಭಿಲಾಷೆ ಎಂದು ತಿಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News