ಹೆಬ್ರಿ ಸೀತಾನದಿ ಬಳಿ ಮರಕ್ಕೆ ಕಾರು ಢಿಕ್ಕಿ: ಅಜ್ಜ ಮೊಮ್ಮಗ ಮೃತ್ಯು; ಇಬ್ಬರಿಗೆ ತೀವ್ರ ಗಾಯ

Update: 2019-10-06 16:36 GMT

ಹೆಬ್ರಿ, ಅ.6: ಕಾರೊಂದು ನಿಯಂತ್ರಣ ತಪ್ಪಿ ರಸ್ತೆ ಬದಿಯ ಮರಕ್ಕೆ ಢಿಕ್ಕಿ ಹೊಡೆದ ಪರಿಣಾಮ ಅಜ್ಜ ಮತ್ತು ಮೊಮ್ಮಗ ಮೃತಪಟ್ಟು, ಇಬ್ಬರು ತೀವ್ರವಾಗಿ ಗಾಯಗೊಂಡ ಘಟನೆ ಹೆಬ್ರಿ ಗ್ರಾಮದ ಸೀತಾನದಿಯ ನಿಸರ್ಗಧಾಮದ ಬಳಿ ಅ.6ರಂದು ಬೆಳಗ್ಗೆ 8.30ರ ಸುಮಾರಿಗೆ ನಡೆದಿದೆ.

ಮೃತರನ್ನು ಸೀತಾನದಿ ನಿವಾಸಿ ಬುಡಾನ್ ಖಾನ್(78) ಹಾಗೂ ಅವರ ಮೊಮ್ಮಗ ಕಾರು ಚಾಲಕ ಶೇಖ್ ಶಾಹಿಲ್(22) ಎಂದು ಗುರುತಿಸ ಲಾಗಿದೆ. ಕಾರಿನಲ್ಲಿದ್ದ ಇವರ ಸಂಬಂಧಿ ಯೂಸುಫ್ ಖಾನ್ ಮತ್ತು ಖಾದರ್ ಖಾನ್ ಗಾಯಗೊಂಡು ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಬುಡಾನ್ ಖಾನ್‌ರ ಸಹೋದರ ಮಗನಿಗೆ ಇಂದು ತೀರ್ಥಹಳ್ಳಿಯಲ್ಲಿ ನಡೆಯಲಿದ್ದ ಮದುವೆ ಕಾರ್ಯದ ಹಿನ್ನೆಲೆಯಲ್ಲಿ ಇವರು ನಾಲ್ವರು ಮನೆಯಿಂದ ಸೆಲೂನ್‌ಗೆ ಶೇವಿಂಗ್ ಮಾಡಲು ಕಾರಿನಲ್ಲಿ ಹೆಬ್ರಿಗೆ ಬಂದಿದ್ದರು. ಶೇವಿಂಗ್ ಮುಗಿಸಿ ವಾಪಾಸ್ಸು ಹೆಬ್ರಿಯಿಂದ ಮನೆ ಕಡೆಗೆ ಹೋಗುತ್ತಿದ್ದಾಗ ಕಾರು ಚಾಲಕನ ನಿಯಂತ್ರಣ ತಪ್ಪಿರಸ್ತೆಯ ತೀರಾ ಎಡಬದಿಗೆ ಹೋಗಿ ನೀರಿನ ತೋಡಿನ ಮಣ್ಣಿನ ದಿಬ್ಬಕ್ಕೆ ಡಿಕ್ಕಿ ಹೊಡೆಯಿತ್ತೆನ್ನಲಾಗಿದೆ.

ಅಲ್ಲಿಂದ ಮುಂದೆ ಸಾಗಿದ ಕಾರು ರಸ್ತೆಯ ಬದಿಯಲ್ಲಿದ್ದ ಮತ್ತಿ ಮರಕ್ಕೆ ಡಿಕ್ಕಿ ಹೊಡೆಯಿತು. ಇದರಿಂದ ಕಾರು ಸಂಪೂರ್ಣ ಜಖಂಗೊಂಡು ಕಾರಿನಲ್ಲಿದ್ದ ನಾಲ್ವರು ಕೂಡ ತೀವ್ರವಾಗಿ ಗಾಯಗೊಂಡಿದ್ದರು. ಇವರಲ್ಲಿ ಬುಡಾನ್ ಖಾನ್ ಸ್ಥಳದಲ್ಲೇ ಮೃತಪಟ್ಟರೆ, ಶಾಹಿಲಂ ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿ ಯಾಗದೆ ಮಣಿಪಾಲ ಆಸ್ಪತ್ರೆಯಲ್ಲಿ ಮೃತಪಟ್ಟರು ಎಂದು ಪೊಲೀಸರು ತಿಳಿಸಿ ದ್ದಾರೆ.

ಈ ಬಗ್ಗೆ ಹೆಬ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News